News Karnataka Kannada
Saturday, April 27 2024
ಚಾಮರಾಜನಗರ

ಚಾಮರಾಜನಗರದಲ್ಲಿ ರಾಷ್ಟ್ರಪತಿಗಳಿಂದ ಬೋಧನಾ ಆಸ್ಪತ್ರೆ ಲೋಕಾರ್ಪಣೆ

New Project (78)
Photo Credit :

ಮೈಸೂರು: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿಮಿತ್ತ ರಾಜ್ಯಕ್ಕೆ ಆಗಮಿಸಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಚಾಮರಾಜನಗರದಲ್ಲಿ ನಡೆಯಲಿರುವ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು ಆ ಸಂಬಂಧ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದರು..

ಬೆಂಗಳೂರಿನಿಂದ ಮೈಸೂರು ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಆಗಮಿಸಿದ ರಾಷ್ಟ್ರಪತಿಗಳನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿ ಬರಮಾಡಿಕೊಂಡರು.

ಈ ವೇಳೆ ಅವರೊಂದಿಗೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಸಚಿವ ಎಸ್.ಟಿ.ಸೋಮಶೇಖರ್ ಇದ್ದರು. ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿಗಳು ಬಳಿಕ ಚಾಮರಾಜನಗರಕ್ಕೆ ಹೆಲಿಕಾಪ್ಟರ್ ನಲ್ಲಿ ತೆರಳಿದರು.

ನೇರವಾಗಿ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟಕ್ಕೆ ತೆರಳಿ ಬಿಳಿಗಿರಿರಂಗನಾಥ ದರ್ಶನ ಪಡೆದ ಬಳಿಕ ಅಲ್ಲಿಂದ ಹೆಲಿಕ್ಯಾಪ್ಟರ್ ಮೂಲಕ ಚಾಮರಾಜನಗರ ಹೊರ ವಲಯದಲ್ಲಿ ನಿರ್ಮಾಣವಾಗಿರುವ ಮೆಡಿಕಲ್ ಕಾಲೇಜು ಹೈಟೆಕ್ ಬೋಧನಾ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ವೇಳೆ ಚಾಮರಾಜನಗರದ ಮೆಡಿಕಲ್ ಕಾಲೇಜು ಬಳಿ ನಿರ್ಮಾಣವಾಗಿರುವ ಹೆಲಿಪ್ಯಾಡ್ ನಲ್ಲಿ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ರವರು ರಾಷ್ಟ್ರಪತಿಗಳನ್ನು ಬರಮಾಡಿಕೊಳ್ಳಲಿದ್ದಾರೆ.

ಮಧ್ಯಾಹ್ನ 1.30 ಕ್ಕೆ ಮೆಡಿಕಲ್ ಕಾಲೇಜು ಸಮೀಪದ ಹೆಲಿಪ್ಯಾಡ್ ಗೆ ಆಗಮಿಸುವ ರಾಷ್ಟ್ರಪತಿಗಳು ಕಾಲೇಜಿನಲ್ಲಿ ಬೋಜನದ ಬಳಿಕ ವಿಶ್ರಾಂತಿ ಪಡೆದ ಬಳಿಕ ಮಧ್ಯಾಹ್ನ 3.30ಕ್ಕೆ ಮೆಡಿಕಲ್ ಕಾಲೇಜಿನ ಭೋಧನಾ ಆಸ್ಪತ್ರೆ ಲೋಕಾರ್ಪಣೆ ಮಾಡಲಿದ್ದಾರೆ. ಚಾಮರಾಜನಗರಕ್ಕೆ ಆಗಮಿಸೋ ಹಿನ್ನೆಲೆ ನಗರದಲ್ಲಿ ಗುಂಡಿ ಬಿದ್ದಿದ್ದ ರಸ್ತೆಗಳೆಲ್ಲವೂ ಡಾಂಬರ್ ಮಯವಾಗಿವೆ. ಡಿವೈಡರ್ಗಳಿಗೆ ಬಣ್ಣ ಬಳೆಯೋದರ ಜೊತೆಗೆ ನಗರವೇ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು