ಚಾಮರಾಜನಗರ : ವರದಕ್ಷಿಣೆ ಕಿರುಕುಳದಿಂದಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಉಡಿಗಾಲದಲ್ಲಿ ಸೋಮವಾರ ನಡೆದಿದೆ. ಉಡಿಗಾಲದ ಜಯಶಂಕರ್ ಎಂಬುವವರ ಪತ್ನಿ 24 ವರ್ಷದ ದಿವ್ಯಾ ಅವರು ಮೃತಪಟ್ಟವರು.ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ತನಿಖೆಯಿಂದ ಗೊತ್ತಾಗಬೇಕಿದೆ.
ಮಗಳನ್ನು ವರದಕ್ಷಿಣೆಗಾಗಿ ಹಿಂಸಿಸಿ, ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ದಿವ್ಯ ಅವರ ತಂದೆ ದೇವಪ್ಪ ಅವರು ಚಾಮರಾಜನಗರದ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.
ದಿವ್ಯ ಅವರ ಪತಿ ಜಯಶಂಕರ್, ಮಾವ ಸಿದ್ದಮಲ್ಲಪ್ಪ, ಅತ್ತೆ ಸುಂದ್ರಮ್ಮ, ಬಾವ ಚಂದ್ರಶೇಖರ್ ಹಾಗೂ ಅವರ ಪತ್ನಿ ರೇಖಾ ಅವರು ತಲೆಮರೆಸಿಕೊಂಡಿದ್ದಾರೆ.
ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಇನ್ಸ್ಪೆಕ್ಟರ್ ಪುಟ್ಟಸ್ವಾಮಿ, ಸಬ್ ಇನ್ಸ್ಪೆಕ್ಟರ್ ಹನುಮಂತ ಉಪ್ಪಾರ್ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.