News Karnataka Kannada
Saturday, April 27 2024
ಚಾಮರಾಜನಗರ

ಹೊಗೆನಕಲ್ ಫಾಲ್ಸ್ ಗೆ ಭೇಟಿ ನೀಡಿದ ಸುತ್ತೂರು ಶ್ರೀಗಳು

Swamiji
Photo Credit :

ಚಾಮರಾಜನಗರ: ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಯಾತ್ರ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟ ಸಮೀಪದ ಹೊಗೆನಕಲ್ ಫಾಲ್ಸ್‍ಗೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಕೇಂದ್ರ ಸ್ವಾಮೀಜಿ ಅವರು ಭೇಟಿ ನೀಡಿ ತೆಪ್ಪದ ಮೂಲಕ ತೆರಳಿ ಜಲಾಶಯದ ವೈಭೋಗವನ್ನು ವೀಕ್ಷಿಸಿದರು.

ಇದೇ ವೇಳೆ ಹೊಗೆನಕಲ್ ಫಾಲ್ಸ್‍ನ ಅಭಿವೃದ್ಧಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಲ್ಲದೆ ಅಧಿಕಾರಿಗಳಿಗೆ ಇಲ್ಲಿಗೆ ಆಗಮಿಸುವ ಮಾದಪ್ಪನ ಭಕ್ತರಿಗೆ ಹಾಗೂ ಪ್ರವಾಸಿಗರಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಿಕೊಡಲು ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು. ಬಳಿಕ ಫಾಲ್ಸ್‍ನಲ್ಲಿ ಶ್ರೀಗಳು ಸಾಲೂರು ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರೊಂದಿಗೆ ತೆಪ್ಪದ ಮೂಲಕ ತೆರಳಿ ಜಲಾಶಯವನ್ನು ವೀಕ್ಷಿಸಿ ಕಣ್ತುಂಬಿಕೊಂಡರು.

ಇದಕ್ಕೂ ಮೊದಲು ಮಲೆಮಹದೇಶ್ವರಬೆಟ್ಟಕ್ಕೆ ಕಾವೇರಿ ನೀರು ಸರಬರಾಗುವ ಘಟಕಕ್ಕೆ ತೆರಳಿ ವೀಕ್ಷಿಸಿ ಈ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಮಲೆಮಹದೇಶ್ವರಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವ ಸ್ವಾಮಿ, ಡಿಎಫ್‍ಒ ಏಡುಕುಂಡಲು, ಅರಣ್ಯ ಇಲಾಖೆಯ ನೌಕರರು, ಪ್ರಾಧಿಕಾರದ ನೌಕರರು ಹಾಗೂ ಇನ್ನಿತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು