News Kannada
Thursday, March 23 2023

ಚಾಮರಾಜನಗರ

ಚಾಮರಾಜನಗರದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿದ್ದ ಕೈದಿ ಸಾವು

Photo Credit :

ಚಾಮರಾಜನಗರ: ಪತ್ನಿ ಕೊಂದು ಜೀವಾವಧಿ ಶಿಕ್ಷೆಗೊಳಗಾಗಿದ್ದ ಅಪರಾಧಿಯೊಬ್ಬ ಕಾರಾಗೃಹದ ಮೊದಲನೆ ಮಹಡಿಯಿಂದ ಬಿದ್ದು ಅಸುನೀಗಿರುವ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಉತ್ತುವಳ್ಳಿ ಗ್ರಾಮದ ಕೈದಿ ಮಂಜು ಎಂಬಾತನೇ ಸಾವನ್ನಪ್ಪಿದವನು.

ಶನಿವಾರ ಬೆಳಗ್ಗೆ ಜೈಲಿನ ಮೊದಲನೆ ಮಹಡಿಯ ಮೆಟ್ಟಿಲುಗಳಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಂಜುನನ್ನು ಕೂಡಲೇ ಚಾಮರಾಜನಗರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಕೈದಿ ಮಂಜು ಆಯತಪ್ಪಿ ಬಿದ್ದನಾ ಅಥವಾ ಆತ್ಮಹತ್ಯೆ ಮಾಡಿಕೊಂಡನಾ ಎನ್ನುವುದರ ಬಗ್ಗೆ ನಿಖರವಾಗಿ ತಿಳಿದುಬಂದಿಲ್ಲ. ಚಾಮರಾಜನಗರ ಮೆಡಿಕಲ್ ಆಸ್ಪತ್ರೆಯಲ್ಲಿ ಮೃತದೇಹವಿದ್ದು ಚಾಮರಾಜನಗರ ಪಟ್ಟಣ ಠಾಣೆಗೆ ಜೈಲಿನ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

18 ವರ್ಷಗಳ ಹಿಂದೆ ಉತ್ತುವಳ್ಳಿ ಗ್ರಾಮದ ಚಿನ್ನತಾಯಮ್ಮ ಎಂಬಾಕೆಯನ್ನು ಮಂಜು ವಿವಾಹವಾಗಿದ್ದ. ಆದರೆ ಐದಾರು ವರ್ಷಗಳ  ಬಳಿಕ ಮದ್ಯಪಾನಕ್ಕೆ ದಾಸನಾಗಿ ನಿತ್ಯ ಪತ್ನಿಯೊಂದಿಗೆ ಜಗಳ ಮಾಡುವುದನ್ನು ರೂಢಿಸಿಕೊಂಡಿದ್ದನು. ಅದೇ ರೀತಿ, 2017 ರ ಅಕ್ಟೋಬರ್ 26 ಮಧ್ಯರಾತ್ರಿ ದಂಪತಿ ಜಗಳ ತಾರಕಕ್ಕೇರಿತ್ತು. ಆ ವೇಳೆ, ಮಂಜು ಪತ್ನಿ ಚಿನ್ನತಾಯಮ್ಮಳಿಗೆ ಮರದ ಪಟ್ಟಿಯಿಂದ ತಲೆಗೆ ಹೊಡೆದು, ಜುಟ್ಟು ಹಿಡಿದು ಗೋಡೆಗೆ ಗುದ್ದಿಸಿ ಕೊಲೆ ಮಾಡಿದ್ದನು.

ಅಂದು ರಾತ್ರಿ ತನ್ನ ಅಪ್ಪ – ಅಮ್ಮನ ನಡುವೆ ನಡೆದ ಗಲಾಟೆಯನ್ನು ಸಂಪೂರ್ಣ ಕಂಡಿದ್ದ ಮಗ ಕೊಲೆ ಮಾಡಿದ್ದು ಹೇಗೆ ಎಂಬುದನ್ನು ನ್ಯಾಯಾಲಯಕ್ಕೆ ವಿವರಿಸಿ, ಅಪರಾಧಿಗೆ ಶಿಕ್ಷೆಯಾಗುವಂತೆ ಮಾಡಿದ್ದನು.

See also  ಗೋಪಾಲಸ್ವಾಮಿ ಬೆಟ್ಟ ವ್ಯಾಪ್ತಿಯಲ್ಲಿ ಹೆಣ್ಣಾನೆ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು