News Kannada
Tuesday, March 28 2023

ಚಾಮರಾಜನಗರ

ವಾಹನ ಡಿಕ್ಕಿ ಹೊಡೆದು ಚಿರತೆ ಸಾವು

Photo Credit :

ಹನೂರು: ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷದ ಚಿರತೆಯೊಂದು ಮೃತಪಟ್ಟ ಘಟನೆ ತಾಲೂಕಿನ ಗುರುಮಲ್ಲಪ್ಪನ ದೊಡ್ಡಿ ಗ್ರಾಮ ಸಮೀಪದ ರಸ್ತೆಯಲ್ಲಿ ಸೋಮವಾರ ಮಧ್ಯರಾತ್ರಿ ನಡೆದಿದೆ.

ಬಿಆರ್ ಟಿ ವನ್ಯಜೀವಿ ಧಾಮದ ನಾಲ್ಕು ವರ್ಷದ ಚಿರತೆ ಗುರುಮಲ್ಲಪ್ಪನ ದೊಡ್ಡಿ ಬಳಿಯಲ್ಲಿ ರಸ್ತೆಯನ್ನು ದಾಟುತ್ತಿದ್ದ ವೇಳೆ  ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಚಿರತೆ ಮೃತಪಟ್ಟಿದೆ. ಮಂಗಳವಾರ ಬೆಳಗ್ಗೆ ಈ ಬಗ್ಗೆ ತಿಳಿದ ಸಾರ್ವಜನಿಕರು, ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕಾಗಮಿಸಿದ ಚಾಮರಾಜನಗರ ಎಸಿಎಫ್ ಸಭ್ಯಶ್ರೀ, ಬಿಆರ್‍ಟಿ ವನ್ಯಜೀವಿ ಧಾಮದ ಎಸಿಎಫ್ ಆರ್‍ಎಫ್‍ಒ ಶಿವರಾಮು ಹಾಗೂ ಸಿಬ್ಬಂದಿ ಪರಿಶೀಲಿಸಿ ಮಹಜರ್ ನಡೆಸಿದ ಬಳಿಕ ನ್ನು ಅರಣ್ಯ ಇಲಾಖೆಯ ಹಿರಿಯ ವೈದ್ಯ ಮುಜೀದ್ ಅವರು ಮರಣೋತ್ತರ ಪರೀಕ್ಷೆ ನಡೆಸಿ, ಚಿರತೆಯ ಕಳೇಬರಹವನ್ನು ಬೈಲೂರು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಶವ ಸಂಸ್ಕಾರ ನೆರವೇರಿಸಿದರು.

See also  ಮಹದೇಶ್ವರ ಬೆಟ್ಟ:ಯುಗಾದಿ ಜಾತ್ರಾ ಮಹೋತ್ಸವಕ್ಕೆ ಚಾಲನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು