News Kannada
Tuesday, October 03 2023
ಚಾಮರಾಜನಗರ

ಹನೂರು: ಸೌಲಭ್ಯ ಕಲ್ಪಿಸುವಂತೆ ಅರಣ್ಯ ಸಚಿವರಿಗೆ ಮನವಿ

Hanur: Forest Minister requested to provide facilities
Photo Credit : By Author

ಹನೂರು: ತಾಲೂಕಿನ ತಮಿಳುನಾಡು ಗಡಿ ಭಾಗದಲ್ಲಿರುವ ಪಾಲಾರ್ ಅಡಿಯಲ್ಲಿ 103 ಕುಟುಂಬಗಳಿದ್ದು 350ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಸೋಲಿಗರ ಹಾಡಿಯಲ್ಲಿ ವಿದ್ಯುತ್ ದೀಪ ಇಲ್ಲದೆ ಇನ್ನೂ ಸಹ ಬುಡ್ಡಿ ದೀಪದಲ್ಲಿ ದಿನ ದಿನ ನೂಕುವಂತಾಗಿದೆ ಕೂಡಲೇ ಈ ಹಾಡಿಗೆ ವಿದ್ಯುತ್ ಸೌಲಭ್ಯ ಸೇರಿದಂತೆ ಮೂಲಸೌಲಭ್ಯಗಳು ಕಲ್ಪಿಸುವಂತೆ ನಿವಾಸಿಗಳು ಮನವಿ ಸಲ್ಲಿಸಿದ್ದಾರೆ.

ಈ ವೇಳೆ ಮನವಿ ಸ್ವೀಕರಿಸಿ ಮಾತನಾಡಿದ ಅರಣ್ಯ ಸಚಿವ ಉಮೇಶ್ ಕತ್ತಿ ಅವರು, ಈ ಸಂಬಂಧ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಇದೇ ಆ. 17ರಂದು ಸಭೆ ಕರೆಯಲಾಗಿದೆ. ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಸೋಲಿಗ ಜನಾಂಗದ ಶ್ರೇಯೋಭಿವೃದ್ಧಿಗಾಗಿ ನಮ್ಮ ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿದ ಕರ್ನಾಟಕದ ಗಡಿ ಭಾಗವಾದ ಈ ಪಾಲಾರ್ ನ ಹಾಡಿಗೆ ಮತ್ತು ಹೊಗೆನಕಲ್ ಜಲಪಾತ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು. ಇಲ್ಲಿನ ಸುತ್ತಮುತ್ತಲಿನ ಗ್ರಾಮಗಳಲ್ಲಿಯೂ ಸಹ ಮಳೆಗಾಲದಲ್ಲಿ ಓಡಾಡಲು ಸೇತುಗಳ ಮೇಲೆ ನೀರು ಹರಿಯುವುದರಿಂದ ಸಂಪರ್ಕವೇ ಕಡಿದು ಹೋಗುತ್ತಿರುವ ಬಗ್ಗೆ ಅಧಿಕಾರಿಗಳಿಂದ ಮತ್ತು ಖುದ್ದು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ಪ್ರವಾಸ ಕೈಗೊಂಡಿರುವುದಾಗಿ ಅವರು ಭರವಸೆ ನೀಡಿದರು.

See also  ಹನೂರು: ಕಾರು ಡಿಕ್ಕಿ, ಬೈಕ್ ಸವಾರ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು