News Kannada
Tuesday, March 21 2023

ಚಾಮರಾಜನಗರ

ಚಾಮರಾಜನಗರ: ಜಿಲ್ಲಾಡಳಿತದ ಕಾರ್ಯ ವೈಖರಿ ವೀಕ್ಷಣೆಗೆ ವಿದ್ಯಾರ್ಥಿನಿ ಜೆ. ಅಗ್ನೀಶ್ ಸಾರ’ಗೆ ಅವಕಾಶ

Chamarajanagar: A student of Chamarajanagar district administration, J. Agneesh Sara gets a chance
Photo Credit : By Author

ಚಾಮರಾಜನಗರ: ವಿಶ್ವ ಯುವ ಕೌಶಲ್ಯ ದಿನಾಚರಣೆಯ ಅಂಗವಾಗಿ ನಡೆಸಲಾದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕೊಳ್ಳೇಗಾಲದ ಜೆ.ಎಸ್.ಎಸ್. ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಜೆ. ಅಗ್ನೀಶ್ ಸಾರ ಅವರಿಗೆ ಇಂದು ಇಡೀ ದಿನ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರೊಂದಿಗೆ ಇದ್ದು ಜಿಲ್ಲಾಡಳಿತದ ಕಾರ್ಯ ವೈಖರಿ ವೀಕ್ಷಣೆಗೆ ಅವಕಾಶ ದೊರೆಯಿತು.

ಪ್ರಥಮ ಬಿ.ಕಾಂ ವಿದ್ಯಾರ್ಥಿನಿಯಾಗಿರುವ ಜೆ. ಅಗ್ನೀಶ್ ಸಾರ ಅವರನ್ನು ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ ಎಂಬ ಕಾರ್ಯಕ್ರಮಕ್ಕೆ ಜಿಲ್ಲಾ ಕೌಶಲ್ಯ ಅಭಿವೃದ್ದಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಆಯ್ಕೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರೊಂದಿಗೆ ಇದ್ದು ಜಿಲ್ಲಾಧಿಕಾರಿಯವರ ದಿನದ ಎಲ್ಲಾ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸಿ ಜಿಲ್ಲಾಧಿಕಾರಿಯವರ ಆಡಳಿತ ಕಾರ್ಯ ಚಟುವಟಿಕೆಗಳನ್ನು ಜೊತೆಯಲ್ಲೇ ಇದ್ದು ನೋಡುವ ಅವಿಸ್ಮರಣೀಯ ಅವಕಾಶ ಲಭಿಸಿತು.

ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಪೋಷಕರೊಂದಿಗೆ ಆಗಮಿಸಿದ ಅಗ್ನೀಶ್ ಸಾರ ಅವರನ್ನು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು. ಆತ್ಮೀಯವಾಗಿ ಮಾತನಾಡಿದ ಜಿಲ್ಲಾಧಿಕಾರಿ ಮುಂದೆ ಏನಾಗಬೇಕೆಂದು ಬಯಸಿದ್ದೀರ ಎಂದು ಅಗ್ನೀಶ್ ಸಾರ ಅವರನ್ನು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಗ್ನೀಶ್ ಸಾರ ಚಾರ್ಟೆಡ್ ಅಕೌಂಟೆಂಟ್ ಆಗಬೇಕು ಎಂದು ಕೊಂಡಿದ್ದೇನೆ ಎಂದರು.

ಬಳಿಕ ಜಿಲ್ಲಾಧಿಕಾರಿಯವರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಾಲ್ಮೀಕಿ ಭವನ ನಿರ್ವಹಣಾ ಸಮಿತಿ, ಗಿರಿಜನರ ಶೈಕ್ಷಣಿಕ ಅಭಿವೃದ್ದಿ ಸಂಬಂದ ಸಭೆ, ದಸರಾ, ಮಹಾಲಯ ಅಮವಾಸ್ಯೆ, ದೀಪಾವಳಿ ಜಾತ್ರೆ ಪೂರ್ವಭಾವಿ ಸಭೆ ಸೇರಿದಂತೆ ಇತರೆ ಸಭೆಗಳಲ್ಲಿ ಅಗ್ನೀಶ್ ಸಾರ ಅವರು ಜಿಲ್ಲಾಧಿಕಾರಿ ಪಕ್ಕದಲ್ಲೇ ಕುಳಿತು ವೀಕ್ಷಿಸಿದರು. ಸಭೆ ಸಂದರ್ಭದಲ್ಲಿ ಟಿಪ್ಪಣಿ ಸಹ ಮಾಡಿಕೊಳ್ಳುತ್ತಿದ್ದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿಯೂ ಜಿಲ್ಲಾಧಿಕಾರಿಯವರೊಂದಿಗಿದ್ದು ಹತ್ತಿರದಿಂದ ಆಡಳಿತ ಕಾರ್ಯಗಳನ್ನು ವೀಕ್ಷಿಸಿದರು. ಸಭೆಗಳ ಬಳಿಕ ಸಂಜೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಗ್ನೀಶ್ ಸಾರ ಅವರನ್ನು ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಟ್ಟರು. ಮುಂದಿನ ಭವಿಷ್ಯ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

See also  ಪಿರಿಯಾಪಟ್ಟಣ: ಮೃತ ಕಾರ್ಯಕರ್ತನ ಕುಟುಂಬಕ್ಕೆ ಪರಿಹಾರ ನೀಡಿದ ಸಿದ್ದರಾಮಯ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು