ಹನೂರು: ತಮಿಳುನಾಡಿನಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಮಹಾರಾಷ್ಟ್ರ ಪ್ರವಾಸಿಗರಿದ್ದ ಬಸ್ ಪಾಲಾರ್ ಬಳಿ ಉರುಳಿ ಬಿದ್ದು ಪರಿಣಾಮ 15 ಜನರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ
ತಮಿಳುನಾಡಿನ ಪ್ರವಾಸ ಮುಗಿಸಿಕೊಂಡು ರಾಜ್ಯದ ಮಲೆಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು,
ಬುಧವಾರ ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಾಲಾರ್ ನ ಎರಡನೇ ತಿರುವಿನಲ್ಲಿ ಉರುಳಿ ಬಿದ್ದಿದೆ.ಬಸ್ ನಲ್ಲಿ 50 ಪ್ರವಾಸಿಗರಿದ್ದರು ಈ ಪೈಕಿ 15 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ತುರ್ತು ವಾಹನದ ಮೂಲಕ ಮಲೆಮಹದೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಆಗಮಿಸಿದ ಮಲೆಮಹದೇಶ್ವರ ಬೆಟ್ಟ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.