News Kannada
Thursday, June 01 2023
ಚಾಮರಾಜನಗರ

ಚಾಮರಾಜನಗರ: ಸಿದ್ದರಾಮಯ್ಯ ಅವರಿಗೆ ಸಚಿವ ಸೋಮಣ್ಣ ಟಾಂಗ್‍

Chamarajanagar: Minister Somanna hits out at Siddaramaiah
Photo Credit : By Author

ಚಾಮರಾಜನಗರ: ನಾನು ಸಿದ್ದರಾಮಯ್ಯರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ, ಒಮ್ಮೆ ಮಾತುಗಳು ಶುರುವಾದರೆ ಅದು ಮತ್ತೆಲ್ಲಿಗೋ ಹೋಗುತ್ತದೆ. ನನಗೆ ಈಗಲೂ ಆತ್ಮವಿಶ್ವಾಸವಿದೆ, ಅವರು ಗಂಟಲಿನಿಂದ ಮಾತನಾಡುತ್ತಿದ್ದಾರೆ ಹೃದಯದಿಂದಲ್ಲ ಎಂದು  ಸಚಿವ ಸೋಮಣ್ಣ ಟಾಂಗ್ ನೀಡಿದ್ದಾರೆ.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಲಿಬಾಬಾ ಮತ್ತು 40 ಕಳ್ಳರು ಎಂಬ ಸಿದ್ದು ಹೇಳಿಕೆಗೆ ಪ್ರತಿಕ್ರಿಯಿಸಿದರು. “ಚುನಾವಣೆ ಬರುತ್ತದೆ, ಹೋಗುತ್ತದೆ. ಅವರು 70 ವರ್ಷ ಅಧಿಕಾರದಲ್ಲಿದ್ದರು, 5-10 ವರ್ಷದಿಂದ ನಾವಿದ್ದೇವೆ. ಸೆಸ್ಕ್ ನೌಕರರಿಗೆ ಕೊಡುತ್ತಿದ್ದ ಉಚಿತ ವಿದ್ಯುತ್ ಅನ್ನು ವಾಪಸ್ ತೆಗೆದುಕೊಂಡಿದ್ದು ಯಾರು?. ಅವರ ಭರವಸೆಗಳು ಭರವಸೆಗಳಾಗಿಯೇ ಉಳಿಯುತ್ತದೆ. ಅವರದ್ದೇ ಸರ್ಕಾರ ರಾಜಾಸ್ಥಾನದಲ್ಲಿದೆ. ಮೊದಲು ಅಲ್ಲಿ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಲಿ ಎಂದು ಸವಾಲು ಹಾಕಿದರು.

ಚಾಮರಾಜನಗರದಲ್ಲಿ ಸ್ಪರ್ಧಿಸುತ್ತೀರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ನಾನು ಚಲಾವಣೆಯಲ್ಲಿರುವ ನಾಣ್ಯ, ರಾಜ್ಯದಲ್ಲಿ ನನಗೇ ಎಂಬ 25-30 ಕ್ಷೇತ್ರ ಇದೆ, ಬಿಜೆಪಿ ಗೆಲ್ಲಲಾಗಲ್ಲ ಎಂಬ ಕ್ಷೇತ್ರಗಳಲ್ಲಿ ಅತಿಹೆಚ್ಚು ಬಹುಮತದಿಂದ ಗೆಲ್ಲಿಸಿದ್ದೇನೆ, ನನಗೆ ಗೋವಿಂದರಾಜನಗರ ಕ್ಷೇತ್ರ ಇದೆ, ಪಕ್ಷ ಎಲ್ಲಿ ಹೇಳುತ್ತೆ ಅಲ್ಲಿ ಸ್ಪರ್ಧೆ ಮಾಡುವುದಾಗಿ ಅವರು ಹೇಳಿದರು.

See also  ಬೆಳೆಗಳ ಮಾಹಿತಿ ಅಪ್ ಲೋಡ್ ಗೆ ರೈತರಿಗೆ ಸಲಹೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು