News Kannada
Wednesday, October 04 2023
ಚಾಮರಾಜನಗರ

ಚಾಮರಾಜನಗರ: ಉತ್ತುವಳ್ಳಿ ಶಾಲೆಗೆ ಚಿಗುರು ಜನಪದ ವೈಭವ ಪ್ರಶಸ್ತಿ

Chamarajanagar: Uthuvalli School bags Chiguru Janapada Vaibhava Award
Photo Credit : By Author

ಚಾಮರಾಜನಗರ: ಯೂತ್ ಫಾರ್ ಸೇವಾ ಸಂಸ್ಥೆ ಚಾಮರಾಜನಗರ ತಾಲೂಕಿನ 17 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸೇವಾ ಭಾರತಿ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಚಿಗುರು ಜನಪದ ವೈಭವ -23 ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಹೆಚ್ಚು ಜಯಶೀಲರಾಗಿ ಸಮಗ್ರ ಪ್ರಶಸ್ತಿಯನ್ನು ಮತ್ತು ಪಾರಿತೋಷಕವನ್ನು ಉತ್ತುವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡೆದುಕೊಂಡಿದೆ.

ಸೇವಾ ಸಂಸ್ಥೆಯ ಮುಖ್ಯಸ್ಥ ಪ್ರವೀಣ್ ಮಾತನಾಡಿ ಸಮಾಜ ಹಾಗೂ ದೇಶ ಸೇವೆಯ ಗುಣವನ್ನು ಹೆಚ್ಚಿಸಿಕೊಳ್ಳಬೇಕು. ಜೀವನದ ಸಮಯವನ್ನು ಸಮಾಜಕ್ಕೆ ಅರ್ಪಿಸುವ ಹಾಗೂ ನೀಡುವ ಗುಣ ಬಾಲ್ಯದಿಂದಲೂ ನೀಡುವಂತಹ ಮನಸ್ಥಿತಿ ನಿರ್ಮಾಣವಾದಾಗ ಸದೃಢ ರಾಷ್ಟ್ರವನ್ನು ಕಟ್ಟಬಹುದು ಎಂದರು.

ರೋಟರಿ ಸಂಸ್ಥೆಯ ಅಧ್ಯಕ್ಷ ಕೆ.ಎಂ.ಮಹದೇವಸ್ವಾಮಿ , ಉತ್ತಮ್ ಮೋಟಾರ್ಸ್ ಮಾಲೀಕರಾದ ಭೂಮಿಕಾ ನಾಗೇಂದ್ರ ರವರು ವಿಜೇತರಿಗೆ ಹಾಗೂ ಎಲ್ಲ ಸ್ಪರ್ಧಿಗಳಿಗೆ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆಯನ್ನು ನೀಡಿದರೆ, ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ ಉತ್ತುವಳ್ಳಿ ಶಾಲೆಯ ಮಕ್ಕಳಿಗೆ ಸಮಗ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಯೂತ್ ಫಾರ್ ಸೇವಾ ಸಂಸ್ಥೆಯ ಜಿಲ್ಲಾ ಸಂಚಾಲಕ ವಿಷ್ಣು, ತೇಜು ನಾಯಕ್, ಬೆಂಗಳೂರಿನ ಹರೀಶ್ ಭಟ್, ರಾಘವೇಂದ್ರ , ವಿಜಯಲಕ್ಷ್ಮಿ, ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಇನ್ನೂರಕ್ಕೂ ಹೆಚ್ಚು ಯೂತ್ ಫಾರ್ ಸೇವಾ ಸಂಸ್ಥೆಯ ಯುವಕರು, 600ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಶಿಕ್ಷಕರು ತೀರ್ಪುಗಾರರು ಪೋಷಕರು ಭಾಗವಹಿಸಿದ್ದರು.

See also  ಯಳಂದೂರು: ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಸಮಸ್ಯೆ ಆಲಿಸಿದ ಸಚಿವರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು