News Kannada
Thursday, March 30 2023

ಚಾಮರಾಜನಗರ

ಚಾಮರಾಜನಗರ: ಮಲೆ ಮಹದೇಶ್ವರ ಮೂರ್ತಿ ಪ್ರತಿಷ್ಠಾಪನೆ, ವೇದಿಕೆ ಹಂಚಿಕೊಳ್ಳಲಿರುವ ಸೋಮಣ್ಣ, ಬಿಎಸ್‌ವೈ

Minister V Somanna and B S Yeddyurappa would share a dais in Chamarajanagara on 18 next
Photo Credit : News Kannada

ಚಾಮರಾಜನಗರ: ಕಳೆದ ಕೆಲ ದಿನಗಳಿಂದ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದ ಸಚಿವ ವಿ.ಸೋಮಣ್ಣ ಅಲ್ಪ ಮಟ್ಟಿಗೆ ಶಾಂತವಾದಂತೆ ಕಾಣುತ್ತಿದ್ದು, ಮಾ.18ರಂದು ಮಲೆ ಮಹದೇಶ್ವರ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಯಡಿಯೂರಪ್ಪ ಹೆಸರಿದ್ದು, ಬಿ.ಎಸ್.ಯಡಿಯೂರಪ್ಪ ಹಾಗೂ ಸೋಮಣ್ಣ ಮನಸ್ತಾಪ ಮರೆತು ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಶಿಷ್ಟಾಚಾರದ ಪ್ರಕಾರ ಸರ್ಕಾರಿ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರದಲ್ಲಿರುವವರ ಹೆಸರನ್ನಷ್ಟೇ ಹಾಕಬೇಕು. ಆದರೆ, ಆಮಂತ್ರಣ ಪತ್ರಿಕೆಯಲ್ಲಿ ಯಡಿಯೂರಪ್ಪ ಹೆಸರು ಕಾಣಿಸಿಕೊಂಡಿದ್ದು, ಇಬ್ಬರು ನಾಯಕರಿಗೆ ಒಗ್ಗಟ್ಟಿನ ಮಂತ್ರ ಪಠಿಸಲು ಬಿಜೆಪಿ ನಾಯಕರು ಮಾದಪ್ಪನ ಬೆಟ್ಟದಲ್ಲಿ ಈ ವೇದಿಕೆ ಸಿದ್ಧಪಡಿಸಿದ್ದಾರೆ ಎನ್ನಲಾಗಿದೆ. ಮಾರ್ಚ್ 1 ರಂದು ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಆರಂಭವಾದ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯಕ್ಕೆ ಬಂದಿದ್ದರು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗವಹಿಸಿದ್ದರು. ಆದರೆ ಚಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ವಿಜಯ ಸಂಕಲ್ಪ ಯಾತ್ರೆ ಆರಂಭಕ್ಕೆ ಗೈರು ಹಾಜರಾಗಿದ್ದರು.

See also  ಕೊಳ್ಳೇಗಾಲ ನಗರಸಭೆ ಉಪಾಧ್ಯಕ್ಷೆ ಪದಚ್ಯುತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು