News Kannada
Friday, June 02 2023
ಚಾಮರಾಜನಗರ

ಚಾಮರಾಜನಗರ: ಮತದಾರರ ಜಾಗೃತಿ ವಾಹನಕ್ಕೆ ಚಾಲನೆ

Chamarajanagar: Voter awareness vehicle launched
Photo Credit : By Author

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ  ಹಾಗೂ ಸ್ವೀಪ್ ಸಮಿತಿ ವತಿಯಿಂದ ಈ ಹಿಂದೆ ಚುನಾವಣೆಯಲ್ಲಿ ಕಡಿಮೆ ಮತದಾನ ಆಗಿರುವ ಮತಗಟ್ಟೆ ವ್ಯಾಪ್ತಿಯ ಮತದಾರರಿಗೆ ಜಾಗೃತಿ ಮೂಡಿಸಲು ವಿಶೇಷವಾಗಿ ರೂಪಿಸಲಾಗಿರುವ ಜಾಗೃತಿ ವಾಹನಕ್ಕೆ ಜಿಲ್ಲಾಧಿಕಾರಿ ಡಿಎಸ್.ರಮೇಶ್ ಹಾಗೂ ಜಿಲ್ಲಾ ಪಂಚಾಯಿತಿ  ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್. ಪೂವಿತಾ ಚಾಲನೆ ನೀಡಿದರು.

ನಗರದ ಜಿಲ್ಲಾಡಳಿತ ಭವನದ ಮುಂಭಾಗ ಹಸಿರು ನಿಶಾನೆ ತೋರುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಲು ವಿನ್ಯಾಸಗೊಳಿಸಿರುವ ವಾಹನ ಸಂಚಾರಕ್ಕೆ ಚಾಲನೆ ಕೊಟ್ಟರು. ಈ ಹಿಂದಿನ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ೯೮ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತದಾರರಿಗೆ ಜಾಗೃತಿ ಮೂಡಿಸಲು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೋಲಿಗರ ಮಾದಮ್ಮ, ಚಿತ್ರನಟರು ಸೇರಿದಂತೆ ವಿವಿಧ ಗಣ್ಯರು ಮತದಾನದ ಮಹತ್ವವನ್ನು ತಿಳಿಸಿಕೊಡುವ ಆಡಿಯೋ ಮತ್ತು ವೀಡಿಯೋ ತುಣುಕುಗಳನ್ನು ಒಳಗೊಂಡಿರುವ ವಾಹನ ಇಂದಿನಿಂದ ಮೇ ೫ರವರೆಗೆ ಸಂಚರಿಸಲಿದೆ.

ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ವಾಹನ ಸಂಚರಿಸಿ ಜಾಗೃತಿ ಮೂಡಿಸಲಿದೆ. ಮತದಾರರ ಜಾಗೃತಿಗಾಗಿ ಸ್ವೀಪ್ ಚಟುವಟಿಕೆಗಳನ್ನು ಚುರುಕುಗೊಳಿಸಲಾಗಿದ್ದು ಜಾಥಾ, ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಗೋಡೆ ಬರಹ, ಇನ್ನಿತರ ಕಾರ್ಯ ಚಟುವಟಿಕೆಗಳ ಮೂಲಕ ಮತದಾನದ ಮಹತ್ವ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತದೆ.

ಜಿಲ್ಲಾ ಪಂಚಾಯಿತಿ  ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ಸಹಾಯಕ ಯೋಜನಾಧಿಕಾರಿ ಧರಣೇಶ್, ಜಿಲ್ಲಾ ಪಂಚಾಯಿತಿ  ಮುಖ್ಯ ಲೆಕ್ಕಾಧಿಕಾರಿ ಬಸವರಾಜು, ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

See also  ವರದಕ್ಷಿಣೆ ಕಿರುಕುಳದಿಂದ ಉಡಿಗಾಲದ ಮಹಿಳೆ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು