News Kannada
Wednesday, November 29 2023
ಚಾಮರಾಜನಗರ

ಕಾವೇರಿ ಕಿಚ್ಚು: ಕನ್ನಡ ಪರ ಸಂಘಟನೆಯ ಕಾರ್ಯಕರ್ತರಿಂದ ಅರೆ ಬೆತ್ತಲೆ ಉರುಳು ಸೇವೆ

Cauvery row: Pro-Kannada activists perform half-naked roll service
Photo Credit : News Kannada

ಚಾಮರಾಜನಗರ: ಕರ್ನಾಟಕ ತಮಿಳುನಾಡು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕಾವೇರಿ ಕಿಚ್ಚು ಹೆಚ್ಚಾಗಿದ್ದು, ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅರೆ ಬೆತ್ತಲೆಯಾಗಿ ಉರುಳು ಸೇವೆ ಮಾಡಿದ ಘಟನೆ ನಡೆದಿದೆ.

ಚಾಮರಾಜನಗರದ ಶ್ರೀ ಚಾಮರಾಜೇಶ್ವರ ಉದ್ಯಾನವನದಿಂದ ಶ್ರೀ ಭುವನೇಶ್ವರಿ ವೃತ್ತದ ತನಕ ಮೆರವಣಿಗೆಯಲ್ಲಿ ಬಂದ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅರೆ ಬೆತ್ತಲಾಗಿ ಉರುಳು ಸೇವೆಗೆ ಮುಂದಾದರು.

ಒಂದು ಕಡೆ ಕಾವೇರಿ ನೀರು ಹಂಚಿಕೆ ನಿರ್ವಾಹಣ ಪ್ರಾಧಿಕಾರ ಮತ್ತು ಸುಪ್ರಿಂ ಕೋರ್ಟ್ ನಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಕಾಂಗ್ರೇಸ್ ಮತ್ತು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ರಾಜ್ಯದ ಹಿತಕ್ಕಿಂತ ರಾಜಕಾರಣವೇ ಮುಖ್ಯವಾಗಿ ಪರಿಣಮಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರವು ಮದ್ಯ ಪ್ರವೇಶ ಮಾಡಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

See also  ಮಂಗಳೂರು: ಶಿಷ್ಟಾಚಾರ ಉಲ್ಲಂಘಿಸಿ ಶಾಂತಿ ಸಭೆ‌, ಸಿಪಿಐಎಂ ಖಂಡನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು