News Kannada
Tuesday, September 26 2023
ಹಾಸನ

ಬೇಲೂರು: ಚನ್ನಕೇಶವ ದೇಗುಲದ ಆಸ್ತಿಗೆ ನಾಮಫಲಕ ಅಳವಡಿಕೆಗೆ ಅಡ್ಡಿ

Belur: Channakeshava temple property blocked from installing signboards
Photo Credit : By Author

ಬೇಲೂರು: ಖಾಸಗಿ ವ್ಯಕ್ತಿಗಳಿಗೆ ಮತ್ತು ಪ್ರಸಿದ್ಧ ಚನ್ನಕೇಶವ ದೇಗುಲ ನಡುವೆ ಇದ್ದ ಆಸ್ತಿ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದು ಅಂತಿಮವಾಗಿ ದೇಗುಲದ ಪರವಾಗಿ ತೀರ್ಪು ಬಂದ ಹಿನ್ನಲೆಯಲ್ಲಿ ಆಸ್ತಿಗೆ ದೇಗುಲದ ನಾಮಫಲಕ ಅಳವಡಿಸುವ ವೇಳೆ ಖಾಸಗಿ ವ್ಯಕ್ತಿಗಳು ಅಡ್ಡಿಪಡಿಸಿದ ಘಟನೆ ನಡೆದಿದ್ದು ಪೊಲೀಸರ ಮಧ್ಯಸ್ಥಿಕೆಯಲ್ಲಿ ನಾಮಫಲಕ ಅಳವಡಿಸಲಾಗಿದೆ.

ಬೇಲೂರು ಪಟ್ಟಣದ ದೇವಸ್ಥಾನ ರಸ್ತೆಯ ಗಣಪತಿ ದೇವಾಲಯದ ಸಮೀಪವಿರುವ ಚನ್ನಕೇಶವ ದೇವಾಲಯಕ್ಕೆ ಸೇರಿದ ಆಸ್ತಿಯ ಸ ನಂ 1/4 A ರಲ್ಲಿ 0- 36 ಕುಂಟೆ ಆಸ್ತಿಗೆ ಸಂಬಂಧಿಸಿದಂತೆ ಹಲವು ವರ್ಷಗಳ ಹಿಂದೆ ಇಲ್ಲಿನ ಸಕಲೇಶಪುರ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಖಾಸಗಿ ವ್ಯಕ್ತಿಗಳಿಗೂ ಹಾಗೂ ದೇವಾಲಯದ ಅಧಿಕಾರಿಗಳ ನಡುವೆ ವ್ಯಾಜ್ಯ ಏರ್ಪಟ್ಟು ಈ ಸಂಬಂಧ ವಿಚಾರಣೆ ನಡೆದಿದ್ದು ಅಂತಿಮವಾಗಿ ಉಪವಿಭಾಧಿಕಾರಿಗಳು ಶ್ರೀ ಚನ್ನಕೇಶವ ದೇವಾಲಯದ ಪರ ಆದೇಶ ನೀಡಿದ ಹಿನ್ನಲೆಯಲ್ಲಿ ಖಾಸಗಿ ವ್ಯಕ್ತಿಗಳು ಆ ತೀರ್ಪನ್ನು ಪ್ರಶ್ನಿಸಿ ರಾಜ್ಯದ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಆ ನಂತರ ರಾಜ್ಯದ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಖಾಸಗಿ ವ್ಯಕ್ತಿಗಳ ದೂರನ್ನು ತಿರಸ್ಕರಿಸಿ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳುವಂತೆ ನೀಡಿದ ಆದೇಶದ ಹಿನ್ನೆಲೆಯಲ್ಲಿ ಇದುವರೆಗೂ ಇಬ್ಬರ ನಡುವೆ ನಡೆದ ವಿಚಾರಣೆಯಲ್ಲಿ ಅಂತಿಮವಾಗಿ ನ.14 ರಂದು ಶ್ರೀ ಚನ್ನಕೇಶವ ದೇವಾಲಯದ ಪರವಾಗಿ ಅಂತಿಮ ಆದೇಶ ನೀಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಮೌಖಿಕ ಸೂಚನೆಯಂತೆ ಗುರುವಾರ ಮಧ್ಯಾಹ್ನ ದೇವಸ್ಥಾನದ ಕಾರ್ಯನಿರ್ವಣಾಧಿಕಾರಿ ವಿದ್ಯುಲತಾ ಹಾಗೂ ಚನ್ನಕೇಶವ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ನಾರಾಯಣಸ್ವಾಮಿ ಮತ್ತು ಪದಾಧಿಕಾರಿಗಳ ನೇತೃತ್ವದಲ್ಲಿ ಆಗಮಿಸಿ ಅತಿಕ್ರಮಣ ಪ್ರವೇಶ ನಿಷೇಧ ಎಂಬ ನಾಮಫಲಕ ಅಳವಡಿಸಲಾಯಿತು.

ಈ ವೇಳೆ ಇದೇ ಸ್ಥಳಕ್ಕೆ ಆಗಮಿಸಿದ ಈ ಆಸ್ತಿ ನಮ್ಮದು ಎಂದು ದಾವೆ ಹಾಕಿದ್ದ ಖಾಸಗಿ ವ್ಯಕ್ತಿಗಳ ಸಂಬಂಧಿಕರು ಸ್ಥಳಕ್ಕೆ ಬಂದು ನಾಮಫಲಕ ಅಳವಡಿಸದಂತೆ ವಿರೋಧ ವ್ಯಕ್ತಪಡಿಸಿದರು. ಈ ಸಂದರ್ಭ ಮಾತಿನ ಚಕಮಕಿ ನಡೆಯಿತು. ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಹಾಗೂ ವ್ಯವಸ್ಥಾಪನಾ ಸಮಿತಿಯವರು ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ದೇವಾಲಯದ ಪರವಿರುವ ಜಿಲ್ಲಾಧಿಕಾರಿಗಳ ಆದೇಶ ಗಮನಿಸಿ ನಾಮಫಲಕವನ್ನು ಯಾರು ತೆಗೆಯದಂತೆ ನಿಮ್ಮ ದಾಖಲಾತಿಗಳನ್ನು ಠಾಣೆಗೆ ತರುವಂತೆ ಸೂಚಿಸಿ ತೆರಳಿದ್ದಾರೆ.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರವಿಶಂಕರ್. ಮೋಹನ್ ಕುಮಾರ್. ರಂಗನಾಥ್. ಪ್ರಮೋದ್. ಸುಧಾ ರಮೇಶ್. ವಿಜಯಲಕ್ಷ್ಮಿ ಸೇರಿದಂತೆ ಹಲವರು ಇದ್ದರು.

See also  ಚಿಕ್ಕಮಗಳೂರು: ಶಾಲೆಗೆ ಹೋಗುತ್ತಿದ್ದ ಬಾಲಕಿ ಹೃದಯಾಘಾತದಿಂದ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು