News Kannada
Saturday, June 03 2023
ಹಾಸನ

“ಭವಾನಿ ರೇವಣ್ಣ ಹಾಸನಕ್ಕೆ ಅನಿವಾರ್ಯ ಅಲ್ಲ ,ಸೂಕ್ತ” ಎಂದ ಸೂರಜ್ ರೇವಣ್ಣ

"Bhavani Revanna is not indispensable for Hassan, it is appropriate," said Suraj Revanna
Photo Credit : News Kannada

ಹಾಸನ: ಹಾಸನ ಜಿಲ್ಲೆ ಜೆಡಿಎಸ್‌ನ ಭದ್ರಕೋಟೆ ೨೦೧೮ರಲ್ಲಿ ಹಾಸನ ತಾಲೂಕನ್ನು ಕಳೆದುಕೊಂಡಿದ್ದೇವೆ ೨೦೨೩ರಲ್ಲಿ ಮರು ಪಡೆದುಕೊಳ್ಳಬೇಕು ಎನ್ನುವುದೇ ನಮ್ಮ ಉದ್ದೇಶವಾಗಿದೆ ಎಂದು ಸೂರಜ್ ರೇವಣ್ಣ ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯ ಅರಕಲಗೂಡು ತಾಲೂಕಿನ ಹರದೂರು ಗ್ರಾಮ ದಲ್ಲಿ ಮಾತನಾಡಿರುವ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ “ಅವರು ಪಕ್ಷದ ಹಿರಿಯ ರಾಜಕಾರಣಿ ಇದ್ದಾರೆ. ನಾವು ಅವರ ಬಗ್ಗೆ ಮಾತನಾಡುವುದು ಸೂಕ್ತ ಅಲ್ಲ ಅವರ ಅಭಿಪ್ರಾಯ ವನ್ನು ವ್ಯಕ್ತಪಡಿಸಿರುತ್ತಾರೆ ನಮಗೂ ಅದಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ಹಾಸನ ಜಿಲ್ಲೆ ರೇವಣ್ಣ ಹಾಗೂ ದೇವೇ ಗೌಡರು ಕೂತ್ಕೊಂಡು ತೀರ್ಮಾನ ಕೈಗೊಳ್ಳುತ್ತಾರೆ. ದೇವೇಗೌಡರ ತೀರ್ಮಾನವೇ ಅಂತಿಮವಾಗಿದೆ. ಈ ಬಗ್ಗೆ ಕುಮಾರಸ್ವಾಮಿ ಅವರಿಗೆ ಮನವರಿಕೆ ಮಾಡುವ ವಿಷಯವಲ್ಲ ಸ್ವರೂಪ ಅವರಿಗೆ ಪಕ್ಷದ ಅಭ್ಯರ್ಥಿ ಆಗಬೇಕು ಅನ್ನುವ ಆಕಾಂಕ್ಷೆ ಇದೆ ಅವರು ಅಂತಯೇ ಬೇಡಿಕೆ ಇಟ್ಟಿದ್ದಾರೆ. ಆದ್ದರಿಂದ ಕುಮಾರಸ್ವಾಮಿ ಅವರು ಈ ರೀತಿ ಹೇಳಿಕೆಗಳನ್ನು ಕೊಡು ತ್ತಿರಬಹುದು ಆದರೆ ರೇವಣ್ಣ ,ಕುಮಾರಣ್ಣ ದೇವೇಗೌಡರ ಸಮ್ಮುಖದಲ್ಲಿ ಎಲ್ಲಾ ವಿಷಯ ಒಪ್ಪಿಸಿ ಅಂತಿಮವಾದ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು .

“ಭವಾನಿ ರೇವಣ್ಣ ಹಾಸನಕ್ಕೆ ಅನಿವಾರ್ಯ ಅಲ್ಲ ,ಸೂಕ್ತ” ಎಂದು ಹೇಳಲು ಬಯಸುತ್ತೇನೆ ನಾನು ರಾಜಕಾರಣದಲ್ಲಿ ಕಿರಿಯನಾಗಿರ ಬಹುದು ಒಂದು ವರ್ಷದಿಂದ ಎಂಎಲ್‌ಸಿ ಆಗಿದ್ದು ಹಾಸನ ತಾಲ್ಲೂಕನ್ನು ನಾನು ನೂಡಲ್ ಕ್ಷೇತ್ರವಾಗಿ ತೆಗೆದುಕೊಂಡು ಪ್ರತಿ ಯೊಂದು ಕಾರ್ಯಕ್ರಮಗಳಲ್ಲೂ ಅಟೆಂಡ್ ಮಾಡಿ ನಾಡಿಮಿಡಿತವನ್ನು ಅರಿತಿದ್ದೇನೆ.
ಗ್ರೌಂಡ್ ಲೆವೆಲ್ ನಲ್ಲಿ ನೋಡ್ತಾ ಇದ್ದು ನಮ್ಮ ತಾಯಿ ಅಭ್ಯರ್ಥಿ ಆಗಬೇಕು ಅನ್ನುವ ಉದ್ದೇಶ ಅಲ್ಲ ನಾವು ಕಾರ್ಯ ಕರ್ತರನ್ನು ಉಳಿಸಿಕೊಳ್ಳಬೇಕಿದೆ ಪಕ್ಷವನ್ನು ಮತ್ತೆ ಸಂಘಟನೆ ಮಾಡಬೇಕಿದೆ ಆದ್ದರಿಂದ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು.

ನಾನು ವೈಯಕ್ತಿಕವಾಗಿ ಹೇಳಬೇಕೆಂದರೆ ಭವಾನಿ ಅವರು ಅಭ್ಯರ್ಥಿ ಆಗಬೇಕು ಎಂದು ಕಾರ್ಯಕರ್ತರ ಅಪೇಕ್ಷೆ ಪಡುತ್ತಿದ್ದು ಅವರೇನೆ ನೋವುಗಳನ್ನು ತೋಡಿಕೊಂಡಿದ್ದಾರೆ ಉತ್ತರ ಕೊಡುವ ಅಭ್ಯರ್ಥಿ ಆಗಬೇಕು ಅಂತ ಹೇಳಲು ಬಯಸುತ್ತೇನೆ ಎಂದರು.

ಹಿಂದಿನಿಂದಲೂ ನಮ್ಮ ತಾತ ಅವರೇ ಈ ಜಿಲ್ಲೆಯ ಪ್ರತಿಯೊಬ್ಬ ಅಭ್ಯರ್ಥಿಯ ಸ್ಪರ್ಧೆಯ ವಿಚಾರವಾಗಿ ನಿರ್ಮಾಣ ಕೈಗೊಳ್ಳುತ್ತಿದ್ದು ಭವಾನಿ ರೇವಣ್ಣ ಎಂ ಎಲ್ ಸಿ ಚುನಾವಣೆಗೆ ಸ್ಪರ್ಧೆ ಮಾಡುತ್ತಾರೆ ಅಂತ ಹೇಳಿದ್ದರು ಆದರೆ ದೇವೇಗೌಡರು ತೀರ್ಮಾನ ಮಾಡಿದ್ದರಿಂದ ನಾನು ಅಭ್ಯರ್ಥಿ ಆಗಬೇಕಾಯಿತು. ಅದೇ ರೀತಿ ಸಂಸದರ ಚುನಾವಣೆಯಲ್ಲಿ ದೇವೇಗೌಡರೇ ಸ್ಪರ್ಧೆ ಮಾಡ ಬೇಕಿತ್ತು ಅವರೇ ಸ್ವಇಚ್ಛೆಯಿಂದ ಪ್ರಜ್ವಲ್ ರೇವಣ್ಣ ಅವರಿಗೆ ದಾರಿ ಮಾಡಿಕೊಟ್ಟರು ಅದೇ ರೀತಿ ಮುಂದಿನ ದಿನಗಳಲ್ಲಿ ಈ ಜಿಲ್ಲೆಯಲ್ಲಿ ಯಾವ ತಾಲೂಕಿನಲ್ಲಿ ಯಾರು ಸ್ಪರ್ಧೆ ಮಾಡಬೇಕು ಅವರೇ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ಸ್ವರೂಪ್ ಅವರು ಬೇರೆ ಅಲ್ಲ , ಹೆಚ್.ಎಸ್ ಪ್ರಕಾಶ್ ಅವರು ಬೇರೆಯಲ್ಲ ಆ ಕುಟುಂಬಕ್ಕೂ ಕೂಡ ನಾಲ್ಕು ಬಾರಿ ಟಿಕೆಟ್ ಕೊಟ್ಟು ಶಾಸಕ ಸ್ಥಾನ ಲಭಿಸಿದೆ ಅವರು ಅಗಲಿದ ನಂತರ ಅವರ ಮಗನನ್ನು ಜಿಪಂ ಉಪಾಧ್ಯಕ್ಷ ಸ್ಥಾನ , ಸಂಜೀವಿನಿ ಸಹಕಾರ ಆಸ್ಪತ್ರೆಯ ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ಸಾಕಷ್ಟು ಅಧಿಕಾರಿಗಳನ್ನು ಅವರಿಗೆ ಕೊಟ್ಟಿದ್ದು ಯಾವುದೇ ಅನ್ಯಾಯವನ್ನು ಮಾಡಿಲ್ಲ ರಾಜಕೀಯವಾಗಿ ಕಡೆಗಣಿಸಿಲ್ಲ ಎಂದು ಸ್ಪಷ್ಟಪಡಿಸಿದರು.

See also  ಹಾಸನ: ಪ್ರಜಾಧ್ವನಿ ಯಾತ್ರೆಯು ರಾಜಕೀಯ ಪ್ರಹಸನ- ಎಚ್.ಕೆ.ಸುರೇಶ್ ಟೀಕೆ

ಹಾಸನ ಕ್ಷೇತ್ರದಲ್ಲಿ ಅಧಿಕಾರ ಸ್ಥಾಪಿಸಲು ನಮ್ಮ ಕುಟುಂಬದಿಂದ ಮಾತ್ರ ಸಾಧ್ಯ ಬದಲಾದ ರಾಜ ಕೀಯ ಸನ್ನಿವೇ ಶದಲ್ಲಿ ಹಾಲಿ ಶಾಸಕರು ನಮ್ಮ ಕಾರ್ಯಕರ್ತ ರನ್ನು ಡಿಸ್ಟರ್ಬ್ ಮಾಡುತ್ತಿದ್ದಾರೆ ಕಾರ್ಯಕರ್ತರನ್ನು ಉಳಿಸಿಕೊಳ್ಳ ಬೇಕಾದ ನಮ್ಮ ಪಕ್ಷವನ್ನು ಹಾಸನ ತಾಲೂಕಿನಲ್ಲಿ ಸ್ಥಾಪಿಸುವ ನಿಟ್ಟಿನಲ್ಲಿ ನಮ್ಮ ಕುಟುಂಬದಿಂದ ಮಾತ್ರ ಸಾಧ್ಯ ಎಂದು ಕಾರ್ಯಕರ್ತರು ಜನರ ಅಪೇಕ್ಷೆಯಾಗಿದ್ದು ಅದರಂತೆ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದು ಸೂರಜ್ ರೇವಣ್ಣ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು