News Kannada
Thursday, March 30 2023

ಹಾಸನ

ಅರಸೀಕೆರೆ: ಭರವಸೆ ನೀಡುವುದರಿಂದ ಅಭಿವೃದ್ಧಿ ಆಗುವುದಿಲ್ಲ- ಶಾಸಕ ಕೆ.ಎಂ.ಶಿವಲಿಂಗೇಗೌಡ

Promises won't lead to development, says MLA K.M. Shivalingegowda
Photo Credit : News Kannada

ಅರಸೀಕೆರೆ: ಭರವಸೆ ನೀಡು ವುದರಿಂದ ಅಭಿವೃದ್ಧಿಯಾಗುವು ದಿಲ್ಲ ಕೊಟ್ಟ ಮಾತಿನಂತೆ ನಡೆದು ಕೊಂಡಾಗ ಮಾತ್ರ ಅಭಿವೃಧಿ ಎಂಬ ಬದ್ಧತೆಯನ್ನು ನನ್ನ ರಾಜ ಕೀಯ ಜೀವನದಲ್ಲಿ ಅಳವಡಿಸಿ ಕೊಂಡಿರುವುದರಿಂದ ಕಳೆದ ೧೫ ವರ್ಷಗಳಲ್ಲಿ ಕ್ಷೇತ್ರದ ಚಿತ್ರಣ ವೇ ಬದಲಾಗಿದೆ ಎಂದು ಶಾಸಕ ಕೆ. ಎಂ ಶಿವಲಿಂಗೇಗೌಡ ಹೇಳಿದರು.

ತಾಲೂಕಿನ ಹಾರನಹಳ್ಳಿ ಮೂಲಕ ಹಾದು ಹೋಗಿರುವ ಅರಸೀಕೆರೆ-ಹಾಸನ ರಾಜ್ಯ ಹೆದ್ದಾರಿ ಹಾರನಹಳ್ಳಿ ವ್ಯಾಪ್ತಿಯಲ್ಲಿ ರಸ್ತೆ ವಿಭಜಕ ಹಾಗೂ ವಿದ್ಯುತ್ ದೀಪಗಳ ಅಳವಡಿಕೆ ಕಾಮಗಾರಿ ಸೇರಿದಂತೆ ೭.೫೦ ಕೋಟಿ ರೂಪಾಯಿವೆಚ್ಚದಲ್ಲಿ ಹಾರನಹಳ್ಳಿ ಗ್ರಾ.ಪಂ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾ ಡಿದರು.

ನಗರ ಪ್ರದೇಶ ಹೆದ್ದಾರಿಗೆ ಹೊಂದಿಕೊಂಡ ಗ್ರಾಮಗಳು ಮಾತ್ರ ಅಭಿವೃದ್ಧಿ ಮಾಡದೆ ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿದೆ ಕುಡಿಯುವ ನೀರು,ರಸ್ತೆ, ಚರಂಡಿ, ತಮ್ಮ ಗ್ರಾಮಗಳಲ್ಲಿಯೇ ಗ್ರಾಮಸ್ಥರು ಸಣ್ಣ ಪುಟ್ಟ ಸಭೆ ಸಮಾರಂಭಗಳನ್ನ ಮಾಡಿಕೊ ಳ್ಳಲು ಅನುಕೂಲವಾಗುವ ರೀತಿಯಲ್ಲಿ ಸಮುದಾಯ ಭವನಗಳ ನಿರ್ಮಾಣ ಹೋಬಳಿ ಯವರು ನಿರ್ಮಾಣಗೊಂಡಿರುವ ವಸತಿ ಶಾಲೆಗಳು ಕ್ಷೇತ್ರದ ಅಭಿವೃದ್ಧಿ ಪಥವನ್ನು ತೋರುತ್ತಿದೆ ಎಂದರು.

ಗಿಜಿಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಧರ್ಮ ಶೇಖರ್ ಮಾತನಾಡಿ ಶಾಸಕರಾಗಿ ೧೫ ವರ್ಷಗಳಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳು ಆಗಿರುವುದರಿಂದ ಪಕ್ಷ ಮೀರಿದ ವ್ಯಕ್ತಿತ್ವವನ್ನು ಬೆಳೆಸಿಕೊಂಡಿರು ವುದಲ್ಲದೆ ಮಾದರಿ ರಾಜಕಾರಣಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಧರ್ಮೇಶ್ ಯಳವಾರೆ, ನಾಗರಾಜ್, ಮಹೇಶ್ ಸರೋಜಾ ಪ್ರಭು ಯಮುನಾ ಮತ್ತಿತರರು ಉಪಸ್ಥಿತರಿದ್ದರು.

See also  ಹಾಸನ: ಐಐಟಿ ಸ್ಥಾಪನೆಗೆ ೨೬೦ ಎಕರೆ ಸಾಕು- ಪ್ರೀತಂ.ಜೆ.ಗೌಡ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು