News Kannada
Thursday, March 23 2023

ಹಾಸನ

ಹಾಸನ: ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಮತ್ತೊಮ್ಮೆ ಹಾಸನ ಜಿಲ್ಲೆ ನಿರ್ಲಕ್ಷ್ಯ, ಆಕ್ರೋಶ

The state government has once again neglected Hassan district in the budget.
Photo Credit : News Kannada

ಹಾಸನ: ರಾಜ್ಯ ಬಿಜೆಪಿ ಸರ್ಕಾರ ಈ ಬಾರಿ ಮಂಡಿಸಿದ ಬಜೆಟ್ “ಜನರ ಕಿವಿಗೆ ಹೂವು ಇಟ್ಟು ಮೂಗಿ ಗೆ ತುಪ್ಪ ಸವರಿದ” ರೀತಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ದೇವ ರಾಜೆ ಗೌಡ ಲೇವಡಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾ ಡಿದ ಅವರು ಇತ್ತೀಚೆಗೆ ಬಜೆಟ್ ಮಂ ಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಿಸುಮಾರು ೩.೦೯ ಲಕ್ಷ ಕೋಟಿ ಪ್ರಮಾಣದ ಬಜೆಟ್ ಮಂಡಿಸಿದ್ದಾರೆ. ಆದರೆ ಬಜೆಟ್‌ನಲ್ಲಿ ಹಾಸನ ಜಿಲ್ಲೆಗೆ ವಿಶೇಷ ಅನುದಾನ ವನ್ನು ಮೀಸಲಿಡದೆ ಮತ್ತೊಮ್ಮೆ ಜಿಲ್ಲೆಯನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದರು.

ಜಿಲ್ಲೆಯ ಏಳು ಶಾಸಕರ ಪೈಕಿ ೬ ಮಂದಿ ಜೆಡಿಎಸ್ ಶಾಸಕರಿದ್ದು ತಮ್ಮ ಪ್ರಭಾವ ಬೀರಿ ಅನುದಾನ ತರಲು ವಿಫಲರಾಗಿದ್ದಾರೆ ಹಾಗೆ ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಪ್ರೀತಂ ಜೆ ಗೌಡ ಅವರು ಮುಖ್ಯಮಂತ್ರಿ ಅವರ ಮನವೊಲಿಸಿ, ವಿಶೇಷ ಅನುದಾನ ತರುವಲ್ಲಿಯೂ ವಿಫಲರಾಗಿದ್ದಾರೆ ಎಂದು ದೂರಿದರು.

ಒಟ್ಟಾರೆ ಅಯವ್ಯಯವನ್ನು ಪರಮರ್ಶಿಸಿದರೆ ಹಾಸನ ಜಿಲ್ಲೆಗೆ ಪ್ರಮುಖವಾಗಿ ಬೇಕಾದ ಅಭಿವೃದ್ಧಿ ಕಾರ್ಯಗಳು ಮರೀಚಿಕೆಯಾಗಿದೆ ಎಂದು ಟೀಕಿಸಿದ ಅವರು ಸಕಲೇಶ ಪುರ ಭಾಗದ ಪ್ರತಿನಿತ್ಯ ಜನರ ಮುಖ ರೋಧನಿಯಾದ ಆನೆ ಮಾನವ ಸಂಘರ್ಷ ಕೊನೆಗಾಣಿಸುವಲ್ಲಿ ವಿಫಲರಾಗಿದ್ದಾರೆ. ಕೇವಲ ಆನೆಗಳಿಗೆ ತಡೆಗೋಡೆ ನಿರ್ಮಾಣದಿಂದ ಸಂಘರ್ಷವನ್ನು ತಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಪ್ರಮುಖವಾದ ವಿವಿಧ ಐತಿಹಾಸಿಕ ಪ್ರವಾಸಿ ತಾಣ ಗಳನ್ನು ಹೊಂದಿರುವ ಹಾಸನದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬಜೆಟ್ ನಲ್ಲಿ ಯಾವುದೇ ಮಾತುಗಳನ್ನು ಹಾಡಿಲ್ಲ,, ಜಿಲ್ಲೆಗೆ ಹೊಸ ಕೈಗಾರಿಕೆ ಸ್ಥಾಪನೆ ಮಾಡುವ ಮೂಲಕ ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡುವ ಯಾವುದೇ ಕೆಲಸವನ್ನು ಸರ್ಕಾರ ಪ್ರಸ್ತಾಪಿಸಿಲ್ಲ ಎಂದು ಆರೋಪಿಸಿದರು.

ಪ್ರಮುಖ ಬೆಳೆಯಾದ ಕಾಫಿ ಮತ್ತು ಏಲಕ್ಕಿ ಬೆಳೆಗೆ ಬೆಂಬಲ ಬೆಲೆ ನೀಡಲು ಬಜೆಟ್‌ನಲ್ಲಿ ಹಣ ನಿಗದಿ ಮಾಡದೇ ಇರುವುದು ಜಿಲ್ಲೆಗೆ ದ್ರೋಹವಾಗಿದೆ ಎಂದು ದೂರಿದರು.

ಅಮ್ಜದ್ ಖಾನ್, ಶಿವಕುಮಾರ್, ಅಬ್ದುಲ್ ಸಮ್ಮದ್, ದೇವಪ್ಪ, ಅಶೋಕ್ ಇದ್ದರು.

See also  ಹಾಸನ: ಎರಡು ಜಿಲ್ಲೆ ಉಸ್ತುವಾರಿ ಹೊಣೆ ತೃಪ್ತಿ ನೀಡಿದೆ- ಗೋಪಾಲಯ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು