News Kannada
Saturday, March 25 2023

ಹಾಸನ

ಹಾಸನ: ಮಾ.೧೦ ರಿಂದ ಹಾಸನದಲ್ಲಿ ಪಂಚರತ್ನ ಯಾತ್ರೆ

Pancharatna Yatra in Hassan from March 10
Photo Credit : News Kannada

ಹಾಸನ: ಜಿಲ್ಲೆಯಲ್ಲಿ ಮಾರ್ಚ್ ೧೦ ರಿಂದ ಪಂಚರತ್ನ ಯಾತ್ರೆ ಆರಂಭವಾಗಲಿದೆ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ತಿಳಿಸಿದರು.
ನಗರದ ಸಂಸದರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾರ್ಚ್ ೧೦ ರಂದು ಬೇ ಲೂರಿನ ಚನ್ನಕೇಶವ ದೇವಾಲಯ ದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅಧಿಕೃತವಾಗಿ ಪಂಚರತ್ನ ಯಾತ್ರೆಗೆ ಚಾಲನೆ ನೀಡಲಾಗುವುದು.

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿಎಂ ಇಬ್ರಾಹಿಂ, ಬೇಲೂರು ವಿಧಾನಸ ಭಾ ಕ್ಷೇತ್ರದ ಶಾಸಕ ಕೆ ಎಸ್ ಲಿಂಗೇಶ್ ಸೇರಿದಂತೆ ಜೆಡಿಎಸ್ ನ ಶಾಸಕರು ಹಾಗೂ ಮುಖಂಡರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಮಾರ್ಚ್ ೧೩ರಂದು ಚನ್ನ ರಾಯಪಟ್ಟಣ, ಮಾ.೧೪ ರಂದು ಅರಸೀಕೆರೆ, ಮಾ. ೧೫ರಂದು ಹೊಳೆ ನರಸೀಪುರ ,ಮಾ .೧೬ ರಂದು ಅರಕಲಗೂಡು,ಮಾ ೧೭ ಸಕಲೇ ಶಪುರ ವಿಧಾನಸಭಾ ಕ್ಷೇತ್ರ ದಲ್ಲಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಕಡೂರು ಹಾಗೂ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಪಂಚರತ್ನ ಯಾತ್ರೆಯು ನಡೆಯಲಿದ್ದು ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಸಮಾರಂಭ ಆಯೋಜನೆ ಮಾಡುವ ಮೂಲಕ ಪಂಚರತ್ನ ಜಾತ್ರೆ ನಡೆಯಲಿದೆ ಎಂದರು. ಜಿಲ್ಲೆಗೆ ಮಾಜಿ ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ಹದಿನಾಲ್ಕು ತಿಂಗಳು ಅಧಿಕಾರ ಅವಧಿಯಲ್ಲಿ ನೀಡಿದಂತಹ ಅಭಿವೃದ್ಧಿ ಕಾಮಗಾರಿಗಳು ಹಾಗೂ ನಂತರ ಬಂದಂತಹ ಕಾಂಗ್ರೆಸ್ ಬಿಜೆಪಿ ಸರ್ಕಾರಗಳಿಂದ ಜಿಲ್ಲೆಗೆ ಆಗಿರುವಂತಹ ಅನ್ಯಾಯಗಳನ್ನು ಜನರಿಗೆ ತಿಳಿಸಲಾಗುವುದು ಎಂದು ಹೇಳಿದರು.

ಶೀಘ್ರದಲ್ಲೇ ಎರಡನೇ ಪಟ್ಟಿ : ಈಗಾಗಲೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯದ ೯೦ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದ ಎರಡನೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಿದ್ದಾರೆ.
ಹಾಸನದ ಏಳು ವಿಧಾನಸಭಾ ಕ್ಷೇತ್ರಗಳನ್ನು ಜೆಡಿಎಸ್ ಗೆಲ್ಲುವ ಗುರಿಯನ್ನು ಇಟ್ಟುಕೊಂಡಿದ್ದು ಅಂತೆಯೇ ಅಭ್ಯರ್ಥಿಗಳ ಪಟ್ಟಿಯನ್ನು ಎಲ್ಲರೂ ತೀರ್ಮಾನ ಕೈಗೊಂಡು ಅಂತಿಮಗೊಳಿಸಲಿದ್ದೇವೆ ಎಂದರು.

ರಾಜ್ಯದಲ್ಲಿ ಎರಡು ರಾಜಕೀಯ ಪಕ್ಷಗಳು ಪಟ್ಟಿ ಬಿಡುಗಡೆ ಮಾಡುವಲ್ಲಿ ಹಿಂದೇಟು ಹಾಕುವ ಸಂದರ್ಭದಲ್ಲಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಮೊದಲನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಇನ್ನು ಕೆಲವೇ ದಿನದಲ್ಲಿ ಎರಡನೇ ಪಟ್ಟಿಯನ್ನು ಸಹ ಬಿಡುಗಡೆ ಮಾಡಲಿದ್ದೇವೆ ಎಂದರು.

ಕಪ್ಪುಚುಕ್ಕಿ ಇಲ್ಲ, ಹೆಮ್ಮೆ ಇದೆ: ಹಲವು ದಶಕಗಳಿಂದ ರಾಜ್ಯದಲ್ಲಿ ಮುತ್ಸದ್ದಿ ರಾಜಕೀಯ ವ್ಯಕ್ತಿಯಾಗಿ ಕೆಲಸ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಇದುವರೆಗೂ ಯಾವುದೇ ಕಪ್ಪು ಚುಕ್ಕಿ ಇಲ್ಲದೆ ಜೆಡಿಎಸ್ ಪಕ್ಷವನ್ನು ಮುನ್ನಡೆಸಿದ್ದಾರೆ.ದೇವೇಗೌಡರು ನನ್ನ ತಂದೆ ಎನ್ನುವುದಕ್ಕೆ ಹೆಮ್ಮೆ ಇದೆ ಎಂದು ತಿಳಿಸಿದರು.

ಕಾಂಗ್ರೆಸ್ ಸಂಸ್ಕೃತಿ ಬಗ್ಗೆ ಅವರ ಮುಖಂಡರೇ ಹೇಳಿದ್ದಾರೆ: ಹಣ ಇದೆ ಅದಕ್ಕಾಗಿ ಪಂಚರತ್ನ ಯಾತ್ರೆ ಮಾಡುತ್ತಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ರೇವಣ್ಣ ಅವರು, ಯಾರ ಬಳಿ ಹಣವಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರಾದ ಹಾಗೂ ಹಿಂದೆ ಆರೋಗ್ಯ ಮಂತ್ರಿ ಆಗಿದ್ದ ರಮೇಶ್ ಕುಮಾರ್ ಅವರೇ ಕಾಂಗ್ರೆಸ್ ಪಕ್ಷದ ನಾಯಕರ ಮಕ್ಕಳು ಮೊಮ್ಮಕ್ಕಳು ತಿನ್ನುವಷ್ಟು ಆಸ್ತಿ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು.

See also  ತ್ರಿಪುರ ಮತ್ತು ನಾಗಲ್ಯಾಂಡ್ ರಾಜ್ಯದಲ್ಲಿ ಬಿಜೆಪಿ ಜಯಭೇರಿ: ಹಾಸನದಲ್ಲಿ ವಿಜಯೋತ್ಸವ

ಶಿವಲಿಂಗೇಗೌಡರಿಗೆ ರಂಣರಂಗದಲ್ಲಿ ಉತ್ತರಿಸುವೆ: ನಾವು ಯಾರನ್ನು ಸಮಾಧಾನ ಮಾಡಲು ಹೋಗುವುದಿಲ್ಲ ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಏನು ಮಾಡಿದ್ದೇವೆ ಎಂದು ರಣರಂಗದಲ್ಲಿ ಉತ್ತರಿಸುವೆ. ರಣರಂಗ ಶುರುವಾಗಿಲ್ಲ ಎಂದು ತಿರುಗಟು ನೀಡಿದರು.

ಗೌಡರಿಗೆ ಕಣ್ಣೀರು ಹಾಕಿಸಿದ್ದಾರೆ ಅನುಭವಿಸುವರು: ದೇವೇಗೌಡರಿಗೆ ಕಣ್ಣೀರು ಹಾಕಿಸಿದ್ದಾರೆ ಅವರಿಗೆ ಒಳ್ಳೆಯದು ಆಗೋಲ್ಲ, ಕಾಂಗ್ರೆಸ್ ಪಕ್ಷದವರು ನಮ್ಮನ್ನು ಬಿ ಟೀಂ ಎಂದು ಜರಿದರು ನಂತರ ಪದ್ಮನಾಭನಗರಕ್ಕೆ ಬಂದು ಪಾದಮುಟ್ಟಿ ಸಿಎಂ ಆಗುವಂತೆ ಒತ್ತಾಯಿಸಿದರು, ದೇವೇಗೌಡರನ್ನು ತುಮಕೂರಿನಲ್ಲಿ ನಿಲ್ಲಿಸಿ ಸೋಲಿಸಿದರು ಅವರ ಕಣ್ಣೀರು ಕಾಂಗ್ರೆಸ್ ಗೆ ಮುಳುವಾಗಲಿದೆ ಎಂದು ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.

೧೫ ವರ್ಷ ಅಧಿಕಾರ ಕೊಟ್ಟು ಸಾಕಿದರು ಮೋಸ ಮಾಡಿದರು.! 

ಅರಸೀಕೆರೆ ಅಭಿವೃದ್ಧಿಗೆ ಸಿದ್ದರಾಮಯ್ಯ ಅವರೆ ಕಾರಣ ಎಂದು ಶಿವಲಿಂಗೇಗೌಡ ಹೇಳಿದ್ದಾರೆ ಆದರೆ ಶಾಸಕರಾಗಿ ಮಾಡಿದ್ದು ಜೆಡಿಎಸ್ ಪಕ್ಷ, ೧೫ ವರ್ಷ ಅವರನ್ನು ಸಾಕಿದ್ದು, ಇದೀಗ ಇಂತಹ ಹೇಳಿಕೆ ಎಷ್ಟು ಸರಿ ಎಂದು ಪ್ರಶ್ನಿಸಿದರು.

ಪ್ರಸಾದ ವಿತರಣೆಯಲ್ಲು ರಾಜಕೀಯ ಬೇಡ..!

ಹೊಳೆನರಸೀಪುರ ಜಾತ್ರೆ ವೇಳೆ ಪ್ರಸಾದ ವಿನಿಯೋಗ ಕುರಿತು ಎದ್ದಿರುವ ಗೊಂದಲ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ರೇವಣ್ಣ ಅವರು ೧೯೯೪ರಿಂದ ನಮ್ಮ ಕುಟುಂಬದಿಂದ ಪ್ರಸಾದ ವಿನಿಯೋಗ ನಡೆಯುತ್ತಿದೆ. ತೇರು ನಿರ್ಮಾಣಕ್ಕೆ ನಾನೇ ಕಾಣಿಕೆಯನ್ನು ನೀಡಿದ್ದೇನೆ. ಹಿಂದಿನ ಸಂಸ್ಕೃತಿ ಮುಂದುವರಿಸಲಾಗಿದೆ ಇದರಲ್ಲು ರಾಜಕೀಯ ಮಾಡುವುದು ಸರಿಯಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು