News Kannada
Sunday, April 02 2023

ಹಾಸನ

ನಂಜನಗೂಡು: ಚಿಕ್ಕ ಕವಲಂದೆ ಗ್ರಾಮಕ್ಕೆ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಭೇಟಿ

Mp V. Sudhakaran visited Chikka Kavalande village. Srinivas Prasad meets
Photo Credit : News Kannada

ನಂಜನಗೂಡು: ತಾಲೂಕಿನ ಚಿಕ್ಕ ಕವಲಂದೆ ಗ್ರಾಮಕ್ಕೆ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಭೇಟಿ ನೀಡಿದ್ದಾರೆ. ಮಳೆಯ ನಡುವೆ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಕುಂದು ಕೊರತೆಯನ್ನು ಆಲಿಸಿದರು.

ಅಂಬೇಡ್ಕರ್ ಭವನದ ಕಾಮಗಾರಿಯನ್ನು ಪರಿಶೀಲನೆ ನಡೆಸಿ ಮಾತನಾಡಿದ ಅವರು, ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ನಾನೇ ಗುದ್ದಲಿ ಪೂಜೆ ನೆರವೇರಿಸಿದ್ದೆ ಆದರೆ ಇನ್ನೂ ಕೂಡ ಭವನ ಪೂರ್ಣಗೊಂಡಿಲ್ಲ. ಇನ್ನು 5 ಲಕ್ಷ ಅನುದಾನವನ್ನು ನೀಡುತ್ತೇನೆ. ಸುಸಜ್ಜಿತವಾಗಿ ಭವನವನ್ನು ಕಟ್ಟಿಸಿಕೊಳ್ಳಿ ಎಂದು ಗ್ರಾಮಸ್ಥರಿಗೆ ತಿಳಿಸಿದರು.

ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ವಿಳಂಬವಾಗುತ್ತಿದೆ ಆದಷ್ಟು ಬೇಗ ಪೂರ್ಣಗೊಳಿಸಿ ತಾವೇ ಉದ್ಘಾಟನೆ ಮಾಡುವಂತೆ ಗ್ರಾಮಸ್ಥರು ಸಂಸದರಲ್ಲಿ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ತಮ್ಮ ಕುಂದುಕೊರತೆ ಸಮಸ್ಯೆಗಳ ಬಗ್ಗೆ ಸಂಸದರಿಗೆ ಅರ್ಜಿಗಳನ್ನು ಸಲ್ಲಿಸಿದರು ಆದಷ್ಟು ಬೇಗ ನಿಮ್ಮ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಸಂಸದ ವಿ ಶ್ರೀನಿವಾಸ್ ಪ್ರಸಾದ್ ಭರವಸೆ ನೀಡಿದರು. ಚಿಕ್ಕ ಕವಲಂದೆ ಗ್ರಾಮಸ್ಥರು ಮತ್ತು ಬಿಜೆಪಿ ಪಕ್ಷದ ಮುಖಂಡರು ಭಾಗವಹಿಸಿದ್ದರು.

See also  ಹಾಸನ: ಕೈಗಾರಿಕಾ ಆಸ್ತಿ ತೆರಿಗೆ ಸರಳೀಕರಣ - ಸಚಿವ ಮುರುಗೇಶ್ ನಿರಾಣಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು