News Kannada
Wednesday, March 29 2023

ಹಾಸನ

ಹಾಸನ: ಪಟಾಕಿ ಸಿಡಿಸಿದ ವಿಚಾರಕ್ಕೆ ಬಿಜೆಪಿ-ಜೆಡಿಎಸ್ ನಡುವೆ ಘರ್ಷಣೆ

BJP-JD(S) clash over a petty issue of bursting crackers
Photo Credit : News Kannada

ಹಾಸನ: ತಾಲೂಕಿನ ದೊಡ್ಡಪುರ ಗ್ರಾಮದಲ್ಲಿ ಶ್ರೀ ಉದ್ಬವ ರಾಮೇಶ್ವರ ಸ್ವಾಮಿಯ ದೇವ ಸ್ಥಾನದ ಜೀರ್ಣೋದ್ದಾರ ಮತ್ತು ದೇವಸ್ಥಾನ ಉದ್ಘಾಟನಾ ಕಾರ್ಯ ಕ್ರಮ ನಡೆದಿದ್ದು, ಕೊನೆಯ ದಿವಸದ ಸಮಾರಂಭದಲ್ಲಿ ಪಟಾಕಿ ಸಿಡಿಸಿದ ಒಂದು ಗುಂಪು ನಡೆವೆ ನಡೆದ ಚಿಕ್ಕ ವಿಚಾರಕ್ಕೆ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮಾತಿಗೆ ಮಾತು ಬೆಳೆದು ದೊಡ್ಡ ಘರ್ಷಣೆ ಉಂಟಾಗಿದ ಪರಿಣಾಮ ಅಲ್ಲಿದ್ದ ಪಕ್ಷಗಳ ಬ್ಯಾನರ್ ಹರಿದು ತಮ್ಮ ಆಕ್ರೋಶವ್ಯಕ್ತಪಡಿಸಿದ ವೇಳೆ ಜಗಳ ನಡೆದು ಐವರಿಗೆ ಗಾಯಗಳಾಗಿ ನಗರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ರಾತ್ರಿ ನಡೆದಿದೆ.

ಹಾಸನ ತಾಲ್ಲೂಕು ಕಸಬಾ ಹೋಬಳಿ ದೊಡ್ಡಪುರ ಗ್ರಾಮದಲ್ಲಿರುವ ಶ್ರೀ ಉದ್ಬವ ರಾಮೇಶ್ವರ ಸ್ವಾಮಿಯ ದೇವಸ್ಥಾನದ ಜೀರ್ಣೋದ್ದಾರ ಮತ್ತು ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮ ನಡೆದಿದ್ದು, ಕೊನೆಯ ದಿವಸದಂದು ರಾತ್ರಿ ೯.೩೦ ಗಂಟೆ ಸಮಯದಲ್ಲಿ ರಸಮಂಜರಿ ಕಾರ್ಯಕ್ರಮ ಮತ್ತು ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರಮಿಸಿದ ಗ್ರಾಮದ ಎಲ್ಲಾ ಪಕ್ಷದ ಮುಖಂಡರುಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿ ಕೊಂಡಿದ್ದು, ಸನ್ಮಾನ ಕಾರ್ಯು ಕ್ರಮ ನಡೆಯುವ ಸಮಯದಲ್ಲಿ ಬಿ.ಜೆ.ಪಿ ಮುಖಂಡ ಮತ್ತು ಹಾಸನ ನಗರಾಭಿವೃದ್ಧಿ ಪ್ರಾಧಿಕಾ ರದ ನಿರ್ದೇಶಕ ಅಶೋಕ್ ಕುಮಾರ್ ವರಿಗೆ ಸನ್ಮಾನ ಮಾಡುವ ಸಮಯದಲ್ಲಿ ಬಿಜೆಪಿ ಕಾರ್ಯಕರ್ತ ರಾಕೇಶ ಎಂಬು ವವನು ಪಟಾಕಿ ಸಿಡಿಸಿದ್ದು, ಈ ವೇಳೆ ಅಲ್ಲಿ ಕುಳಿತಿದ್ದವರಿಗೆ ಪಟಾಕಿ ಕಿಡಿ ಹಾರಿದೆ.

ಇದರಿಂದ ಕುಪಿತರಾದ ಜೆಡಿಎಸ್ ಕಾರ್ಯಕರ್ತರು ರಾಕೇಶನೊಂದಿಗೆ ಗಲಾಟೆ ತೆಗೆದಿದ್ದು, ನೂಕಾಟ ಮತ್ತು ತಳ್ಳಾಟಗಳು ನಡೆದಿರುತ್ತದೆ. ಆಗ ಅಲ್ಲೇ ಇದ್ದ ಪೋಲಿಸರು ಮದ್ಯ ಪ್ರವೇಶಿಸಿ ಲಘು ಲಾಠಿ ಪ್ರಹಾರ ಕೂಡ ನಡೆಸಿ ಜನರನ್ನು ಚದುರಿಸಿದ್ದಾರೆ. ಈ ವೇಳೆ ಘರ್ಷಣೆಯಲ್ಲಿ ಗಾಯಗೊಂಡ ಜೆಡಿಎಸ್ ಬೆಂಬಲಿತ ಐವರನ್ನು ನಗರದ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿಸಲಾಗಿದೆ. ಇವರ ದೂರಿನ ಮೇರೆಗೆ ಅನೇಕರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಗಾಯಳು ಆಗಿರುವ ಜೆಡಿಎಸ್ ಕಾರ್ಯಕರ್ತರನ್ನು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಹೆಚ್.ಪಿ. ಸ್ವರೂಪ್ ಅವರು ರಾತ್ರಿ ಸುಮಾರು ೨ ಗಂಟೆ ಸಮಯದಲ್ಲಿ ಸರಕಾರಿ ಆಸ್ಪತ್ರೆಗೆ ಹೋಗಿ ವಿಚಾರಿಸಿಕೊಂಡು ಬಂದಿದ್ದಾರೆ.

See also  ಹಾಸನ: ಕುತೂಹಲ ಮೂಡಿಸಿದ ಶಾಸಕ ಶಿವಲಿಂಗೇಗೌಡರ ನಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು