News Kannada
Sunday, September 24 2023
ಹಾಸನ

ಹಾಸನ: ನಾವು ಚುನಾವಣೆಗೆ ಸಿದ್ಧ- ಹೆಚ್.ಡಿ.ರೇವಣ್ಣ

People's blessings are on JD(S),' says Revanna
Photo Credit : News Kannada

ಹಾಸನ: ನಾವು ರಾಜ್ಯದ ೨೨೪ ಕ್ಷೇತ್ರದಲ್ಲಿಯೂ ಚುನಾವಣೆಗೆ ಸಿದ್ದರಾಗಿದ್ದೇವೆ ಎಂದು ಮಾಜಿ ಸಚಿವ ಜೆಡಿಎಸ್ ಧುರೀಣ ಹೆಚ್.ಡಿ.ರೇವಣ್ಣ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು ಕೇಂದ್ರ ಚುನಾವಣಾ ಆಯೋಗವು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಚುನಾವಣೆಗೆ ಸಿದ್ದರಾಗಿರಲು ಸೂಚನೆ ನೀಡಿರುವ ಬೆನ್ನಲ್ಲಿ ಮಾತನಾಡಿದ ಅವರು ರಾಜ್ಯದ ೨೨೪ ಕ್ಷೇತ್ರದಲ್ಲೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದರು.

ಮಾ. ೨೬ ರಂದು ಮೈಸೂರಿನಲ್ಲಿ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದ್ದು ಸಮಾರೋಪ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಒಂದು ಲಕ್ಷ ಮಂದಿ ಪಾಲ್ಗೊಳ್ಳಲಿರುವುದಾಗಿ ಹೇಳಿದ ಅವರು ಒಂದೊಂದು ವಿಧಾನಸಭಾ ಕ್ಷೇತ್ರದಿಂದ ಸರಿ ಸುಮಾರು ೧೫೦ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರಲ್ಲದೆ ಜಿಲ್ಲೆಯಿಂದಲೇ ಸರಿ ಸುಮಾರು ಒಂದು ಸಾವಿರ ಬಸ್ ವ್ಯವಸ್ಥೆ ಮಾಡಲಿರುವುದಾಗಿ ಹೇಳಿದರು.

ಮಾ.೨೬ ರಂದು ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ನಮ್ಮ ಪಕ್ಷದ ಅಧ್ಯಕ್ಷರಾದ ಇಬ್ರಾಂಹಿಂರವರು, ದೇವೇಗೌಡರು, ಕುಮಾರಣ್ಣ ಪಟ್ಟಿ ರಿಲೀಸ್ ಮಾಡಲಿದ್ದಾರೆಂದ ರೇವಣ್ಣ , ನರೇಂದ್ರಮೋದಿ, ಅಮಿತ್ ಷಾ ರಾಜ್ಯಕ್ಕೆ ಪದೇ ಪದೇ ಭೇಟಿ ಕುರಿತ ಪ್ರಶ್ನೆಗೆ ಉತ್ತರಿಸಿ ಅವರು ಆಗಾಗ್ಗ ರಾಜ್ಯಕ್ಕೆ ಬಂದರೆ ನಮಗೆ ಒಳ್ಳೆದಾಗುತ್ತೆ ಎಂದು ವ್ಯಂಗ್ಯವಾಡಿದರು.

ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆಂದ ರೇವಣ್ಣ ರಾಹುಲ್‌ಗಾಂದಿ ಅವರ ಮೇಲೆ ಮಾನ ನಷ್ಟ ಮೊಕದ್ದಮೆ ದಾಖಲಿಸಿರುವುದು ತಪ್ಪು ಎಂದು ಖಂಡಿಸಿದರಲ್ಲದೆ. ರಾಹುಲ್ ಗಾಂಧಿಯವರ ಕುಟುಂಬ ದೇಶಕ್ಕೆ ರಾಷ್ಟ್ರಕ್ಕೆ ಕೊಡುಗೆ ನೀಡಿದೆ. ಇಂತಹ ಕುಟುಂಬದವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿರುವುದು ಸರಿಯಲ್ಲವೆಂದು ಅಭಿಪ್ರಾಯಿಸಿದ ಅವರು ಕೋರ್ಟ್ ತೀರ್ಪಿನ ಬಗ್ಗೆ ನಾನು ಪ್ರಶ್ನೆ ಮಾಡುವುದಿಲ್ಲವೆಂದರಲ್ಲದೆ ಬಿಜೆಪಿಯವರು ದ್ವೇಷದ ರಾಜಕಾರಣ ಮಾಡದಂತೆ ಮನವಿ ಮಾಡುವುದಾಗಿ ಹೇಳಿದರು.

See also  ನವದೆಹಲಿ:  ದೇಶದಲ್ಲಿ 7,946 ಹೊಸ ಕೋವಿಡ್ ಪ್ರಕರಣ ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು