News Kannada
Saturday, June 03 2023
ಹಾಸನ

ಬೇಲೂರು: ಭಕ್ತರಿಗೆ ಅಗತ್ಯ ವ್ಯವಸ್ಥೆ, ಮೆಚ್ಚುಗೆ ವ್ಯಕ್ತಪಡಿಸಿದ ಗ್ರಾಮಸ್ಥರು

Belur: Necessary arrangements made for devotees, villagers express appreciation
Photo Credit : News Kannada

ಬೇಲೂರು: ವಿಶ್ವವಿಖ್ಯಾತ ಶ್ರೀ ಚನ್ನಕೇಶವ ಸ್ವಾಮಿ ರಥೋತ್ಸವ ಹಾಗೂ ಏಳು ದಿನಗಳ ಕಾಲ ನಡೆಯುವ ಉತ್ಸವಗಳಲ್ಲಿ ಪಾಲ್ಗೊ ಳ್ಳಲು ಐದು ವರ್ಷಕ್ಕೊಮ್ಮೆ ಕಡೂರು ತಾಲೂಕಿನ ಚಿಕ್ಕಬಾಸೂರ ಗ್ರಾಮ ದಿಂದ ೨ ಸಾವಿರಕ್ಕೂ ಹೆಚ್ಚು ಭಕ್ತರು ವಿವಿಧ ವಾಹನಗಳಲ್ಲಿ ಆಗಮಿಸಿದ್ದು ಚನ್ನಕೇಶವ ಸ್ವಾಮಿ ದೇಗುಲ ವ್ಯವಸ್ಥಾ ಪನಾ ಸಮಿತಿ ಯವರು ಸಂತೆ ಮೈದಾ ನದಲ್ಲಿ ತಂಗಲು ಮೂಲ ಭೂತ ಸೌಕರ್ಯ ಗಳನ್ನು ಕಲ್ಪಿಸಿರುವ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರತಿ ವರ್ಷ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಚಿಕ್ಕ ಬಾಸುರ ಗ್ರಾಮದಿಂದ ಎರಡು ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಚನ್ನಕೇಶವನ ರಥೋತ್ಸವಕ್ಕೆ ಆಗಮಿಸುತ್ತಾರೆ. ತಾತ ಮುತ್ತಾತನ ಕಾಲದಿಂದಲೂ ಈ ಗ್ರಾಮದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಳ್ಳುವುದು ವಾಡಿಕೆಯಾಗಿ ಬೆಳೆದು ಬಂದಿದೆ.

೨೦ ವರ್ಷದ ಹಿಂದೆ ನೂರಾರು ಎತ್ತಿನ ಗಾಡಿಗಳ ಮೂಲಕ ಆಗಮಿಸಿ ಗುಂಡು ತೋಪಿನಲ್ಲಿ ತಂಗುತ್ತಿದ್ದರು. ಆದರೆ ಕಾಲ ಬದಲಾದಂತೆ ಇತ್ತೀಚಿನ ವರ್ಷಗಳಲ್ಲಿ ಟ್ರ್ಯಾಕ್ಟರ್ ಜೀಪು ಕಾರುಗಳಲ್ಲಿ ಬರುತ್ತಿದ್ದಾರೆ. ಏಳು ದಿನಗಳ ಕಾಲ ಚೆನ್ನಕೇಶವನ ಜಾತ್ರಾ ಉತ್ಸವಗಳಲ್ಲಿ ಪಾಲ್ಗೊಳ್ಳುತ್ತಾರೆ. ಚನ್ನಕೇಶವ ದೇಗುಲ ವ್ಯವಸ್ಥಾಪನ ಸಮಿತಿಯಿಂದ ಪಟ್ಟಣದ ಮೂಡಿಗೆರೆ ರಸ್ತೆಯಲ್ಲಿರುವ ಸಂತೆ ಮೈದಾನದಲ್ಲಿ ಇವರಿಗೆ ತಂಗಲು ವ್ಯವಸ್ಥೆ ಮಾಡಿ ಕೊಡುವುದರ ಜೊತೆಗೆ ಮೂಲ ಸೌಕ ರ್ಯಗಳನ್ನು ಒದಗಿಸಲಾಗಿದೆ. ಈ ಬಗ್ಗೆ ಚಿಕ್ಕಬಾಸುರ ಗ್ರಾಮಸ್ಥರು ಮಾತನಾಡಿ ಕಳೆದ ಬಾರಿಗಿಂತ ಈ ಬಾರಿ ವ್ಯವಸ್ಥೆ ಗಳೆಲ್ಲವೂ ಚೆನ್ನಾಗಿದೆ. ಕುಡಿಯುವ ನೀರು, ಶೌಚಾಲಯ ಸ್ನಾನ ಗೃಹ , ಹಾಗೂ ರಾತ್ರಿ ವೇಳೆ ವಿದ್ಯುತ್  ದೀಪದ ವ್ಯವಸ್ಥೆಯನ್ನು ಕಲ್ಪಿಸಿ ರುತ್ತಾರೆ. ನಾವು ಐದು ವರ್ಷಕ್ಕೊಮ್ಮೆ ಚೆನ್ನಕೇಶವನ ಜಾತ್ರೆಯಲ್ಲಿ ಪಾಲ್ಗೊಳ್ಳಲು ಬರುತ್ತೇವೆ. ನಾವು ಚನ್ನಕೇಶವ ನ ಒಕ್ಕಲಾಗಿದ್ದು ಎಲ್ಲಾ ಗ್ರಾಮಸ್ಥರು ಒಗ್ಗೂಡಿ ಬರುವುದು ವಿಶೇಷ ಎಂದರು.

ಚನ್ನಕೇಶವ ಸ್ವಾಮಿ ಸಮಿತಿಯ ಅಧ್ಯಕ್ಷ ನಾರಾಯಣಸ್ವಾಮಿ ಹಾಗೂ ಕಾರ್ಯನಿರ್ಣವಾಧಿಕಾರಿ ಆರ್, ವಿದ್ಯುಲ್ಲತಾ ಮಾತನಾಡಿ, ಕಡೂರು ತಾಲೂಕು ಚಿಕ್ಕ ಬಾಸೂರ ಗ್ರಾಮದಿಂದ ಚನ್ನಕೇಶವನ ಭಕ್ತರು  ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಅವರಿಗೆ ಈ ಬಾರಿ ಸಂತೆ ನಡೆಯುವ ಜಾಗದಲ್ಲಿ ವ್ಯವಸ್ಥೆ ಮಾಡಿದ್ದು ಅಗತ್ಯ ಮೂಲಭೂತ ಸೌಕರ್ಯಗಳಾದ ಶೌಚಾಲಯ ಸ್ನಾನ ಗೃಹ, ಕುಡಿಯುವ ನೀರು ,ವಿದ್ಯುತ್ ವ್ಯವಸ್ಥೆ ಕಲ್ಪಿಸಿದ್ದು ಏಳು ದಿನಗಳ ಕಾಲ ಅವರಿಗೆ ಯಾವುದಕ್ಕೂ ಲೋ ಪವಾಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

See also  ಹಾಸನ: ಗ್ರಾಮೀಣ ಕ್ರೀಡಾ ಕೂಟ ಎಂದರೆ ದಸರಾ ನೆನಪಾಗುತ್ತದೆ- ಶಾಸಕ ಪ್ರೀತಂ ಜೆ ಗೌಡ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು