News Kannada
Saturday, June 03 2023
ಹಾಸನ

ಹಾಸನ: ಚುಡಾಯಿಸಿದವನಿಗೆ ಚಪ್ಪಲಿ ಏಟು ಕೊಟ್ಟ ಯುವತಿ!

ಹಾಸನ: ಚುಡಾಯಿಸಿದವನಿಗೆ ಚಪ್ಪಲಿ ಏಟು ಕೊಟ್ಟ ಯುವತಿ!
Photo Credit : News Kannada

ಹಾಸನ: ಆತ ಪ್ರತಿನಿತ್ಯ ಕಾಲೇಜು ಯುವತಿಯೋರ್ವಳನ್ನು ಹಿಂಬಾಲಿಸುತ್ತಿದ್ದ. ಆಕೆ ಕಾಲೇಜಿಗೆ ಹೋಗುವಾಗ, ಕಾಲೇಜಿನಿಂದ ಮನೆಗೆ ತೆರಳುವಾಗ ಆ ಯುವತಿಯ ಹಿಂದೆ ಬಿದ್ದಿದ್ದ. ಕಾಲೇಜು ಮುಗಿಸಿ ತೆರಳುವ ವೇಳೆ ಯುವತಿಯನ್ನು ಚುಡಾಯಿಸಿ ಕೈ ಹಿಡಿದು ಎಳೆದಿದ್ದಾನೆ ಇದರಿಂದ ರೊಚ್ಚಿಗೆದ್ದ ಯುವತಿ ಬೀದಿ ಕಾಮಣ್ಣನಿಗೆ ಅಟ್ಟಾಡಿಸಿ ಚಪ್ಪಲಿಯಿಂದ ಹೊಡೆದಿದ್ದಾಳೆ.

ಅರಸೀಕೆರೆ ಮೂಲದ ಯುವತಿ ಹಾಸನದ ಪದವಿ ಕಾಲೇಜಿಗೆ ಬರುತ್ತಿದ್ದಳು. ಈಕೆಗೆ ಆಲೂರು ತಾಲೂಕಿನ, ಕಿರಗಡಲು ಗ್ರಾಮದ ಯಶವಂತ್ ಕಿರುಕುಳ ನೀಡುತ್ತಿದ್ದ. ಪ್ರತಿನಿತ್ಯ ಆ ಯುವತಿ ಹಿಂದೆ ಬಿದ್ದು ಚುಡಾಯಿಸುತ್ತಿದ್ದ. ಈ ವಿಚಾರವನ್ನು ಯುವತಿ ತನ್ನ ಪೋಷಕರ ಬಳಿಯೂ ಹೇಳಿರಲಿಲ್ಲ. ಎರಡು ಮೂರು ಬಾರಿ ಆ ಯುವಕನಿಗೆ ಎಚ್ಚರಿಕೆಯನ್ನು ಸಹ ನೀಡಿದ್ದಳು. ಆದರೂ ಆತ ತನ್ನ ನಡವಳಿಕೆಯನ್ನು ತಿದ್ದಿಕೊಂಡಿರಲಿಲ್ಲ.

ಯುವತಿ ಕಾಲೇಜು ಮುಗಿಸಿ ತನ್ನ ಗೆಳತಿಯರ ಜೊತೆ ಹೋಗುವಾಗ ಹಾಸನ ನಗರದ ಜಿಲ್ಲಾಸ್ಪತ್ರೆ ಎದುರು ಇರುವ ಬಿಎಸ್‌ಎನ್‌ಎಲ್ ಭವನದ ಬಳಿ ಯುವತಿಯನ್ನು ಚುಡಾಯಿಸಿ ಕೈ ಹಿಡಿದು ಎಳೆದಿದ್ದಾನೆ. ಇದರಿಂದ ರೊಚ್ಚಿಗೆದ್ದ ಯುವತಿ ಪ್ರತಿದಿನ ಹೀಗೆ ಮಾಡ್ತಿಯಾ ಎಂದು ಚಪ್ಪಲಿಯಿಂದ ನಡುರಸ್ತೆಯಲ್ಲಿ ಯುವಕನನ್ನು ಅಟ್ಟಾಡಿಸಿ ಹೊಡೆದಿದ್ದಾಳೆ. ಈ ವಿಚಾರ ತಿಳಿದು ಸ್ಥಳದಲ್ಲಿ ಜಮಾಯಿಸಿ ಸಾರ್ವಜನಿಕರು ಬೀದಿ ಕಾಮಣ್ಣನಿಗೆ ಧರ್ಮದೇಟು ಕೊಟ್ಟು ಪೊಲೀಸರಿಗೊಪ್ಪಿಸಿದ್ದಾರೆ.

ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಯುವಕನನ್ನು ಕರೆದೊಯ್ದ ಪೊಲೀಸರು ವಿಚಾರಣೆ ನಡೆಸಿದ್ರು.. ಯುವತಿ ದೂರು ಕೊಡದ ಹಿನ್ನೆಲೆ ಯುವಕನಿಗೆ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ. ಬೀದಿ ಕಾಮಣ್ಣನಿಗೆ ಬುದ್ದಿ ಕಲಿಸಿದ ವಿದ್ಯಾರ್ಥಿನಿ ಧೈರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

See also  ಹಾಸನ: ಚುನಾವಣೆ ಹಿನ್ನೆಲೆ ಮತದಾರರಿಗೆ ಆಮಿಷ, ಕ್ರಮಕ್ಕೆ ಒತ್ತಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು