ಹಾಸನ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ೧೫ ಅಭ್ಯರ್ಥಿಗಳಿಂದ ಒಟ್ಟು ೨೧ ನಾಮಪತ್ರಗಳು ಸಲ್ಲಿಕೆಯಾಗಿವೆ.
೧೯೩- ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಗಳಾಗಿ ನಟರಾಜು, ಸುಬ್ರಹ್ಮಣ್ಯ ಹಾಗೂ ಎಂ.ಜಿ.ನಂಜೇಗೌಡ, ಬಿ.ಜೆ.ಪಿ ಅಭ್ಯರ್ಥಿ ಚಿದಾನಂದ ಸಿ.ಆರ್, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಪವಿತ್ರ ಜಿ.ಕೆ ಇವರು ತಲಾ ಒಂದೊಂದು ನಾಮಪತ್ರ ಸಲ್ಲಿಸಿದ್ದಾರೆ.
೧೯೪- ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಬಿ.ಜೆ.ಪಿ ಪಕ್ಷದ ಜಿ.ವಿ. ಬಸವರಾಜು, ಲೋಕಶಕ್ತಿ ಪಕ್ಷದ ಅಭ್ಯರ್ಥಿ ಹೊಳೆಯಪ್ಪ, ಕೆ.ಆರ್.ಎಸ್ ಪಕ್ಷದ ಅಭ್ಯರ್ಥಿ ಉಮೇಶ್ ತಲಾ ಒಂದೊಂದು ನಾಮಪತ್ರ ಸಲ್ಲಿಸಿದ್ದಾರೆ.
೧೯೫-ಬೇಲೂರು ವಿಧಾನಸಭಾ ಕ್ಷೇತ್ರಕ್ಕೆ ಬಿ.ಎಸ್.ಪಿ ಪಕ್ಷದಿಂದ ಗಂಗಧಾರ್ ಡಿ ಎಸ್. ನಾಮಪತ್ರ ಸಲ್ಲಿಸಿದ್ದಾರೆ.
೧೯೭-ಹೊಳೆನರಸೀಪುರ ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಶ್ರೆಯಸ್ ಎಂ.ಪಟೇಲ್ ಹಾಗೂ ಬಿ.ಎಸ್.ಪಿ ಅಭ್ಯರ್ಥಿ ತಾರೇಶ್ ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
೧೯೮-ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯೋಗಾರಮೇಶ್, ಪಕ್ಷೇತರ ಅಭ್ಯರ್ಥಿಗಳಾಗಿ ಎ.ಎಂ.ಮಲ್ಲೇಶ್ ಹಾಗೂ ವಿಜಯ ಭಾರತಿ,ಭಾರತೀಯ ಡಾ.ಬಿ.ಆರ್ ಅಂಬೇಡ್ಕರ್ ಜನತಾ ಪಕ್ಷದ ಅಭ್ಯರ್ಥಿ ಎಚ್.ಪಿ ಮಂಜುನಾಥ್ ತಲಾ ಒಂದೊಂದು ನಾಮಪತ್ರ ಸಲ್ಲಿಸಿದ್ದಾರೆ.
೧೯೯-ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಜೆ.ಪಿ ಅಭ್ಯರ್ಥಿ ಎಸ್ ಮಂಜುನಾಥ ಎರಡು ನಾಮಪತ್ರ ಹಾಗೂ ಪಕ್ಷೇತರ ಅಭ್ಯರ್ಥಿ ರವಿ ಜಿ.ಸಿ ಒಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅರ್ಚನಾ ಎಂ.ಎಸ್. ಅವರು ತಿಳಿಸಿದ್ದಾರೆ.