News Karnataka Kannada
Thursday, May 02 2024
ಹಾಸನ

ಬಿಜೆಪಿ ದುರಾಡಳಿತದ ವಿರುದ್ಧ ಕಾಂಗ್ರೆಸ್‌ಗೆ ಬಹುಮತ: ದೇವರಾಜೇಗೌಡ

Congress has majority against BJP's misrule: Devaraje Gowda
Photo Credit : News Kannada

ಹಾಸನ : ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ದುರಾಡಳಿತಕ್ಕೆ ಬೇಸತ್ತು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಜನರು ಬೆಂಬಲ ಸೂಚಿಸಿದ್ದು ಗೆಲುವಿಗೆ ಸಹಕರಿಸಿದ ಕಾರ್ಯಕರ್ತರು ಹಾ ಗೂ ಮತದಾರರಿಗೆ ಅಭಿನಂದನೆ ಸಲ್ಲಿಸುವುದಾಗಿ ಕಾಂಗ್ರೆಸ್ ಜಿಲ್ಲಾ ಘಟಕದ ಮಾಧ್ಯಮ ವಕ್ತಾರ ದೇವರಾಜೇಗೌಡ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು ಚುನಾವಣಾ ಪೂರ್ವ ಸಮೀಕ್ಷೆ ನಿಜವಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದಿದೆ. ಮುಂದಿನ ದಿನಗಳಲ್ಲಿ ಉತ್ತಮ ಆಡಳಿತ ನೀಡುವ ಮೂಲಕ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಮುಂದಿನ ಒಂದು ವರ್ಷದಲ್ಲಿ ಬರುವಂತಹ ಲೋಕಸಭೆ ಚುನಾ ವಣೆಯಲ್ಲಿಯೂ ಪಕ್ಷದ ಬಲವರ್ಧನೆಗೆ ಕೆಲಸ ಮಾಡುವುದಾಗಿ ತಿಳಿಸಿದರು.

ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಇತರೆ ಪಕ್ಷಗಳಿಗೆ ತೀವ್ರ ಪೈಪೋಟಿ ನೀಡಿದ್ದು ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಶಿವಲಿಂಗೇಗೌಡರು ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿ ದ್ದಾರೆ ಇದರಿಂದ ಪಕ್ಷಕ್ಕೆ ಅಲ್ಪ ತೃಪ್ತಿ ದೊರೆತಿದ್ದು ಮುಂದಿನ ಚುನಾ ವಣೆಗಳಲ್ಲಿ ಪಕ್ಷ ಬಲವರ್ಧನೆಗೆ ಪ್ರಾಮಾಣಿಕ ಪ್ರಯತ್ನ ಮಾಡ ಲಾಗುವುದು ಎಂದರು.

ಅರಸೀಕೆರೆ ವಿಧಾನಸಭಾ ಕ್ಷೇತ್ರ ದಿಂದ ಗೆದ್ದಿರುವ ಕೆಎಂ ಶಿವಲಿಂಗೇ ಗೌಡರು ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವ ನಿಟ್ಟಿನಲ್ಲಿ ಮನವಿ ಮಾಡುವುದಾಗಿ ಹೇಳಿದ ಅವರು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷವಿರೋಧಿ ಕೆಲಸ ಮಾಡಿರುವ ಕುರಿತು ಜಿಲ್ಲೆಯ ಕೆಲ ಮುಖಂಡರ ಹೆಸರು ಕೇಳಿ ಬರುತ್ತಿದ್ದು ಈ ಸಂಬಂಧ ನಿರ್ದಿಷ್ಟ ದೂರುಗಳು ಬಂದಲ್ಲಿ ಕೆಪಿಸಿಸಿ ಗಮನಕ್ಕೆ ತರಲಾಗುವುದು ಎಂದು ದೇವರಾಜೇಗೌಡ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಿವಕುಮಾರ್, ಅಬ್ದುಲ್ ಹಕೀಂ, ಮಲ್ಲಿಗೆವಾಳು ದೇವಪ್ಪ, ಚಂದ್ರ ಶೇಖರ್, ಪ್ರಕಾಶ್, ಜಗದೀಶ್ ಇದ್ದರು.
ಜೆಡಿಎಸ್ ವಿಸರ್ಜನೆ ಮಾಡುವರೆ ವಿಧಾನಸಭೆ ಚುನಾವಣೆ ಯಲ್ಲಿ ಜೆಡಿಎಸ್ ಸಂಪೂರ್ಣ ಬಹುಮತ ಪಡೆಯದಿದ್ದಲ್ಲಿ ವಿಸ ರ್ಜನೆ ಮಾಡುವುದಾಗಿ ಜೆಡಿ ಎಸ್ ಪಕ್ಷದ ವರಿಷ್ಠ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿ ದ್ದರು ಇಂದು ಪಕ್ಷ ಕಳೆದ ಬಾರಿ ಗಿಂತ ಕಳಪೆ ಪ್ರದರ್ಶನ ನೀಡಿದ್ದು ಕುಮಾರಸ್ವಾಮಿ ಅವರ ಮಾತಿಗೆ ಬದ್ಧರಾಗುವರೇ ಎಂದು ಪ್ರಶ್ನಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು