News Kannada
Thursday, June 01 2023
ಹಾಸನ

ಭ್ರಷ್ಟಾಚಾರ ಹಾವಳಿಗೆ ಶೀಘ್ರವೇ ಕಡಿವಾಣ: ಶಾಸಕ ಹೆಚ್.ಕೆ. ಸುರೇಶ್ ಎಚ್ಚರಿಕೆ

Corruption, middlemen menace will be curbed soon: MLA H.K. Suresh Warns
Photo Credit : News Kannada

ಬೇಲೂರು: ರಾಜ್ಯದ ೨೨೪ ಕ್ಷೇತ್ರದಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರ ಅತ್ಯಂತ ಹಿಂದುಳಿದಿದ್ದು,  ಇಲ್ಲಿ ಭ್ರಷ್ಟಾಚಾರ ಮತ್ತು  ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮುಕ್ತ ಕ್ಷೇತ್ರಕ್ಕೆ ಒತ್ತು ನೀಡಬೇಕಿದೆ.   ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ,ಮದ್ಯವರ್ತಿಗಳ ಹಾವಳಿಗೆ ಶೀಘ್ರವೇ ಕಡಿವಾಣ ಹಾಕಲಾ ಗುತ್ತದೆ ಎಂದು ಬೇಲೂರು ಶಾಸಕ ಹೆಚ್.ಕೆ.ಸುರೇಶ್ ಇಲಾಖಾವಾರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಪಟ್ಟಣದ ಪುರಸಭಾ ಮುಂಭಾಗದಲ್ಲಿ ನಡೆದ ‘ನನ್ನ ಲೈಪ್ ನನ್ನ ಸ್ವಚ್ಛ ನಗರ’ ಎಂಬ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಯೋಜನೆ ಜೊತೆಯಲ್ಲಿ ಇಲ್ಲಿನ ಅಡಗಿರುವ ಭ್ರಷ್ಟಾಚಾರ ಮತ್ತು ಮಧ್ಯವರ್ತಿಗಳೆಂಬ ಕಸವನ್ನು ನಿರ್ಮೂಲನೆ ಮಾಡಿ ಸ್ವಚ್ಛತೆಗೆ ಎಲ್ಲರೂ ಕೂಡ ಕೈಜೊಡಿಸಬೇಕಿದೆ. ಒಂದು ಕೈಯಲ್ಲಿ ಯಾವುದೇ ಕಾರಣಕ್ಕೂ ಚಪ್ಪಾಳೆ ಹೊಡೆಯಲು ಸಾದ್ಯವಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವ ಕಾರಣದಿಂದ ಮಾಜಿ ಸಚಿವರಾದ ಬಿ.ಶಿವರಾಂರವರು ಮತ್ತು ಪುರಸಭಾ ಕಾಂಗ್ರೆಸ್ ಸದಸ್ಯರು ಕ್ಷೇತ್ರದ ಅಭಿವೃದ್ದಿಗೆ ಪಕ್ಷಾತೀತವಾಗಿ ಸಹಕರಿಸಬೇಕು ಎಂದ ಅವರು ಬೇಲೂರು ಹೇಳಿ-ಕೇಳಿ ಪ್ರವಾಸಿ ಮತ್ತು ಶಿಲ್ಪಕಲಾ ನಾಡು, ಇಲ್ಲಿನ ಅಭಿವೃದ್ಧಿಯನ್ನು ಇಡೀ ದೇಶವೇ ಗಮನಿಸುವ ಕಾರಣದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ಅನುದಾನದಿಂದ ಕೆಲಸ ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದರು.

ಪುರಸಭಾ ಅಧ್ಯಕ್ಷೆ ತೀರ್ಥ ಕುಮಾರಿ ಮಾತನಾಡಿ,ಪಟ್ಟಣದ ಸ್ವಚ್ಛತೆಗೆ ಪುರಸಭೆ ಮನೆ-ಮನೆ ಬಳಿಗೆ ಕಸ ವಿಲೇವಾರಿ ವಾಹನ ಕಳಿಸಿದರೂ ಕೂಡ ಬಹುತೇಕ ಶಿಕ್ಷಣವಂತರೇ ಎಲ್ಲೆಂದರಲ್ಲಿ ಕಸ ಹಾಕುವ ಪರಿಪಾಠದಿಂದ ಸಮಾಜ ತಲೆತಗ್ಗಿಸುವಂತಾಗಿದೆ.  ವಿಶೇಷವಾಗಿ ಪ್ರವಾಸಿ ತಾಣ ಬೇಲೂರು ಪ್ಲಾಸ್ಟಿಕ್ ಮುಕ್ತವಾಗಬೇಕಿದೆ. ಈ ನಿಟ್ಟಿನಲ್ಲಿ ನನ್ನ ಲೈಪ್ ನನ್ನ ಸ್ವಚ್ಛ ನಗರದಲ್ಲಿನ ನಿರುಪಯುಕ್ತ ವಸ್ತುಗಳನ್ನು ಸಂಗ್ರಹಿಸಿ, ಮರುಬಳಕೆ ಮಾಡಲು ಪಟ್ಟಣದ ಐಡಿಎಸ್‌ಎಂಟಿ ಮತ್ತು ಪಂಪೌಹೌಸ್ ರಸ್ತೆಯಲ್ಲಿ ಮಳಿಗೆ ತೆರೆದಿದ್ದು ಅಲ್ಲಿಗೆ ವಸ್ತುಗಳನ್ನು ನೀಡಬೇಕು.  ಕೋಳಿಅಂಗಡಿ, ಬಾರ್ ಹಾಗೂ ಬೇಕರಿ ಅಂಗಡಿಗಳ ತ್ಯಾಜ್ಯ ಹೆಚ್ಚಾಗಿಯೇ ರಸ್ತೆ ಇಕ್ಕೆಲಗಳಲ್ಲಿ  ರಾತ್ರೋರಾತ್ರಿ ಹಾಕುವ ಹವ್ಯಾಸ ಬೆಳೆಸಿಕೊಂಡಿದ್ದಾರೆ ಇದನ್ನು ಬಿಟ್ಟು ಪುರಸಭೆಯೊಂದಿಗೆ ಸಹಕಾರ ನೀಡಬೇಕು ಎಂದ ಅವರು ನೂತನ ಶಾಸಕರಾದ ಹೆಚ್.ಕೆ.ಸುರೇಶ್ ಅವರು ಕೂಡ ಪುರಸಭಾ ಸಮಗ್ರ ಅಭಿವೃದ್ಧಿಯಲ್ಲಿ ಹಿರಿಯ ಪಾತ್ರ ವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಜಮಿಲಾತೌಫಿಕ್,ಜಿ.ಶಾಂತಕುಮಾರ್, ಬಿ.ಗಿರೀಶ್, ಜಗದೀಶ್, ಉಷಾ, ಶ್ರೀನಿವಾಸ್, ಪ್ರಭಾಕರ್, ಅಕ್ರಮ್ ಪಾಷ, ನಾಮಿನಿ ಸದಸ್ಯರಾದ ಪೈಂಟ್‌ರವಿ, ಜಗದೀಶ್, ಮಂಜುನಾಥ್, ಮುಖ್ಯಾಧಿಕಾರಿ ಮಂಜುನಾಥ್ ಸೇರಿದಂತೆ ಅಭಿಯಾನದಲ್ಲಿ ಹಸಿರು ಭೂಮಿ ಪ್ರತಿಷ್ಠಾನದ ಸೌಭಾಗ್ಯ, ಅಂತೋಣಿ, ಸಂಪತ್ತು ಸೇರಿದಂತೆ ಇನ್ನು ಮುಂತಾದವರು ಹಾಜರಿದ್ದರು.

See also  ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು