ಹಾಸನ: ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗ ಕಲಾವಿದರ ಸಾಧಕರ ಶ್ರೀ ಮಾತಾ ಪ್ರಕಾಶನ ಕರ್ನಾಟಕ ಹಾಗೂ ದಿ ಜರ್ನಿ ಆಫ್ ಸೊಸೈಟಿ ಸಂಸ್ಥಾಪಕ ಡಾ.ನಾಗರಾಜ ತಂಬ್ರಹಳ್ಳಿ ನೇತೃತ್ವದಲ್ಲಿ ಸಂಘಟನೆ ವತಿಯಿಂದ ನೀಡಲಾಗುವ “ಸಾಧಕ ರತ್ನ ರಾಷ್ಟ್ರೀಯ ಪ್ರಶಸ್ತಿ”ಗೆ ಆಯ್ಕೆ ಮಾಡಲಾಗಿದೆ ಎಂದು ಡಾ.ನಾಗರಾಜ ತಂಬ್ರಹಳ್ಳಿ ತಿಳಿಸಿದ್ದಾರೆ.
ಈ ಪ್ರಶಸ್ತಿಯನ್ನು ಹೆಚ್. ಎಸ್. ಪ್ರತಿಮಾ ಹಾಸನ್ ರವರಿಗೆ ಶೈಕ್ಷಣಿಕ, ಸಾಹಿತ್ಯ, ಸಾಮಾಜಿಕ, ಸಾಂಸ್ಕೃತಿಕ, ಎಲ್ಲಾ ಕ್ಷೇತ್ರದ ಸಾಧನೆಯನ್ನು ಗಣನೆಗೆ ತೆಗೆದುಕೊಂಡು ಈ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಇವರು ಗಾಯಕಿಯಾಗಿದ್ದು, ಮುಕ್ತಕ, ಚುಟುಕು, ಲೇಖನ, ಕವಿತೆ, ಟಂಕಾ , ರುಬಾಯು, ಗಜಲ್, ವಿಮರ್ಶೆ ಹೀಗೆ ಹಲವಾರು ಪ್ರಕಾರಗಳನ್ನು ಬರೆಯುತ್ತಿದ್ದು ದಿನ ನಿತ್ಯ ಪತ್ರಿಕೆಗಳಲ್ಲಿ ಪ್ರಕಟಗೊಳ್ಳುತ್ತಿದೆ .