ಹಾಸನ: ಕಾರ್ಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಕುಂದೂರು ಮಲ್ಲೇನಹಳ್ಳಿ ಗ್ರಾಮದಲ್ಲಿ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ ವಾಗಿರುವ ಘಟನೆ ನಡೆದಿದೆ.
ಹೇಮಾವತಿ ಎಂಬುವರಿಗೆ ಸೇರಿದ ಮನೆ ಸಂಪೂರ್ಣವಾಗಿ ಬೆಂಕಿಗೆ ಸುಟ್ಟು ಹೋಗಿದ್ದು ದಿಕ್ಕಿಲ್ಲದೆ ಕುಟುಂಬ ನರಳುತ್ತಿದೆ. ಮನೆಯಲ್ಲಿ ವಾಸವಾಗಿದ್ದ ಹೇಮವತಿ ಮತ್ತು ಅವರ ಇಬ್ಬರು ಮಕ್ಕಳು ಭರತ್ ಮತ್ತು ಶ್ರಾವಣಿ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಮನೆಯಲ್ಲಿದ್ದ ದವಸ, ಧಾನ್ಯ ಬಟ್ಟೆ, ಪಾತ್ರೆ ಇತರೆ ಮರ -ಮುಟ್ಟು ಸಾಮಾನುಗಳು ಸಂಪೂರ್ಣ ನಾಶ ನಾಶವಾಗಿವೆ. ಇದ್ದ ಮನೆಯನ್ನು ಕಳೆದುಕೊಂಡು ಬೀದಿಗೆ ಬಂದಿರುವ ಕುಟುಂಬಕ್ಕೆ ಜಿಲ್ಲಾಡಳಿತ ಪರಿಶೀಲಿಸಿ ಸೂಕ್ತ ಪರಿಹಾರ ನೀಡಿ ಬಡಕುಟುಂಬದ ಬದುಕಿಗೆ ದಾರಿ ದೀಪವಾಗಬೇಕು ಎಂದು ಸಂಘಟಕರು ಒತ್ತಾಯಿಸಿದ್ದಾರೆ.