News Karnataka Kannada
Friday, March 29 2024
Cricket
ಹಾಸನ

ಹಾಸನ: ರಾಜ್ಯಾಧ್ಯಕ್ಷೆ ಸ್ಥಾನ ಯಾವುದೇ ಚರ್ಚೆ ನಡೆದಿಲ್ಲ- ಭವಾನಿ ರೇವಣ್ಣ

There was no discussion on state president's post, says Bhavani Revanna
Photo Credit : News Kannada

ಹಾಸನ: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಅಲಂಕರಿಸುವ ವಿಚಾರವಾಗಿ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಭವಾನಿ ರೇವಣ್ಣ ಸ್ಪಷ್ಟಪಡಿಸಿದರು.

ನಗರದ ಸಂಸದರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಷದ ಅಧ್ಯಕ್ಷ ಸ್ಥಾನದ ಕುರಿತು ನಮ್ಮ ಕುಟುಂಬದಲ್ಲಿ ಮಾತುಕತೆ ನಡೆದಿಲ್ಲ ಕೇವಲ ಕೆಲ ಪತ್ರಿಕೆಗಳಲ್ಲಿ ಈ ಬಗ್ಗೆ ವರದಿ ಬಂದಿರುವುದನ್ನು ನೋಡಿದ್ದೇನೆ. ಯಾವುದೇ ಒಂದು ಹುದ್ದೆ ಅಥವಾ ಪದವಿ ನಮಗೆ ಭಗವಂತ ದಯಪಾಲಿಸಿದರೆ ಮಾತ್ರ ಅದನ್ನು ಪಡೆಯಲು ಸಾಧ್ಯ ಎಂಬ ನಂಬಿಕೆಯೊಂದಿಗೆ ಮುನ್ನಡೆಯುತ್ತಿದ್ದೇನೆ ಈ ಹಿಂದಿನ ಚುನಾವಣೆ ಟಿಕೆಟ್ ಕೈತಪ್ಪಿ ದಾಗಲು ಇದೇ ಮಾತು ಹೇಳಿದ್ದೆ ಎಂದು ನೆನಪಿಸಿದರು.

ಈ ಬಾರಿಯ ವಿಧಾನಸಭೆ ಚುನಾವಣೆ ಯಲ್ಲಿ ಸ್ವರೂಪ್ ಅವರನ್ನು ಗೆಲ್ಲಿಸಿಕೊಂಡು ಬರುವ ಮೂಲಕ ದೇವೇಗೌಡರ ಹುಟ್ಟುಹಬ್ಬಕ್ಕೆ ಕೊಡುವೆಯಾಗಿ ನೀಡುವುದಾಗಿ ಹೇಳಿದ್ದೆವು ಅದ ರಂತೆ ಇಡೀ ಕುಟುಂಬ ಹಾಗೂ ಮುಖಂಡರು ಕಾರ್ಯಕರ್ತರು ಸಹಕಾರದಿಂದ ಸ್ವರೂಪ್ ಅವರು ೮,೦೦೦ಕ್ಕೂ ಹೆಚ್ಚು ಮತಗಳಿಂದ ಗೆಲುವು ಪಡೆದಿದ್ದಾರೆ. ಇದಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಹಾಸನ ಲೋಕಸಭಾ ಕ್ಷೇತ್ರ ದಿಂದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಸ್ಪರ್ಧೆ ನಡೆಸಿದರೆ ಅವರಿಗೆ ಮೊದಲ ಆದ್ಯತೆ ನೀಡ ಲಾಗುವುದು ಪ್ರಜ್ವಲ್ ರೇವಣ್ಣ ಕಳೆದ ಬಾರಿ ಸ್ಪರ್ಧೆ ವಿಚಾರವಾಗಿ ದೇವೇಗೌಡರೇ ತೀರ್ಮಾನ ಕೈಗೊಂಡಿದ್ದರು ಆದರೆ ಅವರನ್ನು ಕುಟುಂಬದವರೇ ಬೇರೆ ಕ್ಷೇತ್ರಕ್ಕೆ ಕಳುಹಿಸಿದರು ಎಂಬ ಅಪವಾ ದವು ಕೇಳಿ ಬಂದಿತ್ತು ಎಂದು ಹೇಳಿದರು.

ಮುಂದಿನ ಲೋಕಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇದ್ದು ಪ್ರತಿ ತಾಲೂಕು ಮಟ್ಟದಲ್ಲಿ ಮುಖಂಡರು ಕಾರ್ಯ ಕರ್ತರು ಸೇರಿದಂತೆ ಎಲ್ಲರೂ ಒಗ್ಗೂಡಿ ಲೋಕಸಭಾ ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸುವು ದಾಗಿ ಭವಾನಿ ರೇವಣ್ಣ ಇದೆ ವೇಳೆ ತಿಳಿಸಿದರು.

ಈ ವೇಳೆ ಶಾಸಕ ಸ್ವರೂಪ್ ಪ್ರಕಾಶ್ , ಸ್ವಾಮೀ ಗೌಡ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು