ಮಡಿಕೇರಿ: ಕೊಡವ ಸಮುದಾಯದ ಅಭಿವೃದ್ಧಿಗೆ ಕೊಡವ ಅಭಿವೃದ್ಧಿ ನಿಗಮ ಮಂಡಳಿಯ ಅವಶ್ಯಕತೆಯಿದ್ದು, ಕೂಡಲೇ ಸರ್ಕಾರ ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿರುವ ಯುನೈಟೆಡ್ ಕೊಡವ ಆರ್ಗನೈಷೇಶನ್(ಯುಕೊ) ಸಂಘಟನೆಯು ಈ ಸಂಬಂಧ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿಯನ್ನು ಸಲ್ಲಿಸಿದೆ.
ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರಿಗೆ ಯುನೈಟೆಡ್ ಕೊಡವ ಆರ್ಗನೈಶೈಶನ್(ಯುಕೊ) ಸಂಘಟನೆ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ನೇತೃತ್ವದ ನಿಯೋಗ ಮನವಿ ಸಲ್ಲಿಸಿದ್ದು, ನಿಯೋಗಕ್ಕೆ ಕೊಡಗಿನ ಶಾಸಕರಾದ ಕೆ.ಜಿ.ಬೋಪಯ್ಯ,ಅಪ್ಪಚ್ಚು ರಂಜನ್, ಎಂಎಲ್ ಸಿ ವೀಣಾ ಅಚ್ಚಯ್ಯ ಅವರು ಸಾಥ್ ನೀಡಿದರು.
ಈ ವೇಳೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಿಯೋಗವು ಕೊಡವ ಸಮುದಾಯದ ಬಗ್ಗೆ ಮತ್ತು ಕೊಡಗಿನ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು. ಎಲ್ಲವನ್ನು ಆಲಿಸಿದ ಮುಖ್ಯಮಂತ್ರಿಗಳು ಕೊಡವ ಅಭಿವೃದ್ಧಿ ಮಂಡಳಿ ರಚನೆಗೆ ಒಪ್ಪಿಗೆ ನೀಡಿದ್ದು, ಮುಂದಿನ ಬಜೆಟ್ ನಲ್ಲಿ ಕೊಡವ ಅಭಿವೃದ್ಧಿ ನಿಗಮ ಘೋಷಣೆ ಮಾಡುವ ಭರವಸೆ ನೀಡಿದ್ದಾರೆ.