ಕೊಡಗು: ಮಾಜಿ ಸೈನಿಕ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವೀರಾಜಪೇಟೆ ಪಟ್ಟಣದ ಮೀನುಪೇಟೆಯಲ್ಲಿ ನಡೆದಿದೆ.
ಕಾಮಧೇನು ಬಡಾವಣೆಯ ನಿವಾಸಿ ಅಚ್ಚಪಂಡ ತಮ್ಮಯ್ಯ (94) ಎಂಬವರೇ ತಮ್ಮ ಮನೆಯಲ್ಲಿ ಗುಂಡು ಹಾರಿಸಿಕೊಂಡು ಮೃತಪಟ್ಟ ವ್ಯಕ್ತಿ.
ಅನಾರೋಗ್ಯವೇ ಆತ್ಮಹತ್ಯೆಗೆ ಕಾರಣವೆಂದು ಹೇಳಲಾಗಿದೆ. ತಮ್ಮಯ್ಯ ಅವರು ಸೇನೆಯ ನಂತರ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ವೀರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.