News Kannada
Sunday, March 26 2023

ಮಡಿಕೇರಿ

ಶ್ರೀಗಂಧದ ಮರಗಳನ್ನು ಕಡಿದು ಸಾಗಾಟ ಮಾಡಲು ಯತ್ನ ಮೂವರ ಬಂಧನ

Photo Credit :

ಕೊಡಗು: ಕಾಫಿ ತೋಟದಲ್ಲಿ ಬೆಳೆದು ನಿಂತಿದ್ದ ಎರಡು ಶ್ರೀಗಂಧದ ಮರಗಳನ್ನು ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ್ದ ಮಾರುತಿ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಕಾಸರಗೋಡು ಜಿಲ್ಲೆಯ ಬ್ಯಾಲ ಗ್ರಾಮದ ಕೃತಿಗುರು(29),ಮಡಿಕೇರಿ‌ ತಾಲೂಕಿನ ಚೆಂಬು ಗ್ರಾಮದ ಶಶಿಕುಮಾರ್ (28) ಹಾಗೂ ಸೋಮವಾರಪೇಟೆ ತಾಲೂಕಿನ ಕಣಿವೆಬಸವನಹಳ್ಳಿ ಗ್ರಾಮದ ಸಂಜು(35) ಬಂಧಿತ ಆರೋಪಿಗಳು.

ಆರೋಪಿಗಳು ಶನಿವಾರಸಂತೆ ವಲಯದ ಮಾಲಂಬಿ ಶಾಖೆಯ ಕಣಿವೆಬಸವನಹಳ್ಳಿ ಗ್ರಾಮದ ಸಂಜೀವ ಎಂಬವರಿಗೆ ಸೇರಿದ್ದೆನ್ನಲಾದ ಕಾಫಿ ತೋಟದಲ್ಲಿ ಬೆಳೆದು ನಿಂತಿದ್ದ ಎರಡು ಶ್ರೀಗಂಧದ ಮರಗಳನ್ನು ಕಡಿದು 7 ತುಂಡುಗಳನ್ನಾಗಿ ಪರಿವರ್ತಿಸಿದ್ದಲ್ಲದೆ, ಕೆಎ-19 ಎನ್ 4911ರ ಮಾರುತಿ ಕಾರಿನಲ್ಲಿ‌ ಸಾಗಾಟ ಮಾಡಲು ಯತ್ನಿಸುತ್ತಿದ್ದರೆನ್ನಲಾಗಿದೆ.

ವಿಷಯವರಿತ ಉಪ ವಲಯ ಅರಣ್ಯಾಧಿಕಾರಿ ಸೂರ್ಯ ಎಂ.ಜೆ. ಹಾಗೂ ಅರಣ್ಯ ರಕ್ಷಕರಾದ ವೆಂಕಟೇಶ್ ,ಶಂಕರಗೌಡ ಕುಲಕರ್ಣಿ ಮತ್ತು ಆರ್.ಆರ್.ಟಿ. ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಮಾಲು ಸಹಿತ ಕಾರನ್ನು ವಶಪಡಿಸಿಕೊಂಡಿದ್ದಾರೆ.

See also  ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ; ರವೀಂದ್ರ ಮತ್ತು ಚೇತನ್‌ ನಡುವೆ ನೇರ ಹಣಾಹಣಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು