News Kannada
Saturday, September 23 2023
ಮಡಿಕೇರಿ

ಕೊಡಗಿನ ಅಭಿವೃದ್ಧಿಗೆ ಕೈಜೋಡಿಸಿ: ಎಂ.ಪಿ.ಅಪ್ಪಚ್ಚು ರಂಜನ್

Untitled 2 Recovered Recovered Recovered 46
Photo Credit :

ಮಡಿಕೇರಿ: ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸುವಂತಾಗಬೇಕು. ಇದರಿಂದ ಆರ್ಥಿಕ ಚಟುವಟಿಕೆಗೆ ಸಹಕಾರಿಯಾಗಲಿದೆ ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಹೇಳಿದರು.

 ತಾಲ್ಲೂಕಿನ ಹೊದ್ದೂರು ಗ್ರಾ.ಪಂ.ಕಚೇರಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಸ್ವರಾಜ್ ಸೌಧ’ ಸಭಾಂಗಣವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿ,  ಕೃಷಿ ಜೊತೆಗೆ ಪ್ರವಾಸೋದ್ಯಮಕ್ಕೆ ಒತ್ತು ನೀಡಿದಾಗ ಆರ್ಥಿಕ ಚಟುವಟಿಕೆಗೆ ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಇಲ್ಲಿ ನಿರ್ಮಾಣವಾಗಲಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು.

ಹಿಂದೆ ಕ್ಲಬ್ ಮಹೀಂದ್ರ ರೆಸಾರ್ಟ್ ನಿರ್ಮಾಣ ಸಂದರ್ಭದಲ್ಲಿ ನಾವು ಸಹ ವಿರೋಧ ವ್ಯಕ್ತಪಡಿಸಿದ್ದೆವು. ತದ ನಂತರ ತಾಜ್ ವಿವಾಂತ, ತಾಮರ, ಆರೇಂಜ್ ಕೌಂಟಿ, ಇಬ್ಬನಿ ಹೀಗೆ ಹಲವು ರೆಸಾರ್ಟ್‌ಗಳು ಆರಂಭವಾದವು. ಕ್ಲಬ್ ಮಹೇಂದ್ರದಲ್ಲಿಯೇ 150 ಮಂದಿ ಸ್ಥಳೀಯರಿಗೆ ಉದ್ಯೋಗ ದೊರೆತಿದೆ. ಹೀಗೆ ಕೃಷಿ ಜೊತೆಗೆ ಪ್ರವಾಸೋದ್ಯಮಕ್ಕೆ ಒತ್ತು ನೀಡಿದಾಗ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.

ಪ್ರತೀ ವಾರ 25 ಸಾವಿರಕ್ಕೂ ಹೆಚ್ಚು ಜನರು ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಾರೆ. ಇದರಿಂದ ವ್ಯಾಪಾರ ವಹಿವಾಟು ಟ್ಯಾಕ್ಸಿ, ಹೋಟೆಲ್, ಹೀಗೆ ಆರ್ಥಿಕ ಚಟುವಟಿಕೆಗೆ ಅನುಕೂಲವಾಗಲಿದೆ. ಕೊಡಗು ಜಿಲ್ಲೆಯಲ್ಲಿ ಭೂಮಿಯ ಬೆಲೆಯು ಹೆಚ್ಚಳವಾಗಿದೆ.    ಕೊಡಗು ಪ್ರವಾಸೋದ್ಯಮ ತನ್ನದೇ ಆದ ಸ್ಥಾನ ಪಡೆಯುತ್ತಿದೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಆದಲ್ಲಿ, ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಅವಕಾಶಗಳು ದೊರೆಯಲಿವೆ. ಆದ್ದರಿಂದ ಎಲ್ಲರೂ ಕ್ರೀಡಾಂಗಣ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.

See also  ಕೊಡಗು ಜಿಲ್ಲಾಧಿಕಾರಿ : ಇಲಿಜ್ವರ ರೋಗ ಹರಡದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಮನವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು