News Kannada
Thursday, September 21 2023
ಮಡಿಕೇರಿ

ಕೊಡಗು ಗೌಡ ಸಮಾಜಗಳ ಒಕ್ಕೂಟದಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

Untitled 1 Recovered 15
Photo Credit :

ಮಡಿಕೇರಿ: ಕೊಡಗು ಗೌಡ ಸಮಾಜಗಳ ಸಹಕಾರದೊಂದಿಗೆ ಜೂ.27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಮಡಿಕೇರಿಯಲ್ಲಿ ಆಚರಿಸಲಾಗುವುದೆಂದು ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೋಮಣ್ಣ ಸೂರ್ತಲೆ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಗ್ಗೆ 10 ಗಂಟೆಗೆ ನಗರದ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಹಾಗೂ ಎಲ್ಲಾ ಗೌಡ ಸಮಾಜಗಳ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ನೀರಾವರಿ ಬಗ್ಗೆ ಅಪಾರ ಅರಿವು ಹೊಂದಿ ಶತಮಾನಗಳ ಹಿಂದೆ ರಾಜಕಾಲುವೆ, ಕೆರೆ-ಕಟ್ಟೆಗಳಿಗೆ ಆದ್ಯತೆ ನೀಡಿ ಪ್ರತಿಯೊಂದು ಜನಾಂಗಕ್ಕೂ ಗೌರವ ಮತ್ತು ಮಾನ್ಯತೆ ನೀಡುವುದರೊಂದಿಗೆ ಶತಮಾನಗಳ ದೂರದೃಷ್ಟಿ ಹೊಂದಿದ್ದು, ಬೆಂಗಳೂರು ಜಗದ್ವಿಖ್ಯಾತಿ ಹೊಂದಲು ಕಾರಣೀಭೂತರಾದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಜೂ.27 ರಂದು ರಾಜ್ಯಾದ್ಯಂತ ಆಚರಿಸಲಾಗುತ್ತಿದೆ. ಕೊಡಗಿನಲ್ಲೂ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಲಾಗುವುದು ಎಂದು ಸೋಮಣ್ಣ ಸೂರ್ತಲೆ ತಿಳಿಸಿದ್ದಾರೆ.

 

See also  ವಿವಿಧ ಇಲಾಖೆ ಸಚಿವರುಗಳನ್ನು ಭೇಟಿ ಮಾಡಿದ ಕೊಡಗು ಕಾಫಿ ಬೆಳೆಗಾರರ ನಿಯೋಗ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು