News Kannada
Sunday, December 10 2023
ಮಡಿಕೇರಿ

ಮಡಿಕೇರಿ| ಜು.23 ರಂದು ಕಗ್ಗೋಡ್ಲುವಿನಲ್ಲಿ ರಾಜ್ಯಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

State-level mud field sports meet to be held at Kaggodlu on July 23
Photo Credit :

ಮಡಿಕೇರಿ : 2022-23ನೇ ಸಾಲಿನ 30ನೇ ರಾಜ್ಯಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳು ಜು.23 ರಂದು ಕಗ್ಗೋಡ್ಲು ಗ್ರಾಮದ ಪಡನ್ನೋಳಂಡ ಬೋಪಣ್ಣ ಕುಶಾಲಪ್ಪ ಅವರ ಗದ್ದೆಯಲ್ಲಿ ನಡೆಯಲಿದೆ ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ.

ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಫ್ ಇಂಡಿಯಾ (ಮಡಿಕೇರಿ ಘಟಕ), ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಕಗ್ಗೊಡ್ಲು ಕಾವೇರಿ ಯುವಕ ಸಂಘ ಸಂಯುಕ್ತಾಶ್ರಯದಲ್ಲಿ ಬೆಳಗ್ಗೆ 9.30 ರಿಂದ ಸ್ಪರ್ಧೆಗಳು ನಡೆಯಲಿವೆ.

ಸಾರ್ವಜನಿಕ ಪುರುಷ ಮತ್ತು ಮಹಿಳೆಯರ ಹಗ್ಗ ಜಗ್ಗಾಟ (9 ಜನರ ತಂಡ), ಸಾರ್ವಜನಿಕ ಪುರುಷರ ವಾಲಿಬಾಲ್ (4 ಜನರ ತಂಡ), ಸಾರ್ವಜನಿಕ ಮಹಿಳೆಯರಿಗೆ ಥ್ರೋಬಾಲ್ (6 ಜನರ ತಂಡ), ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಮಧ್ಯಾಹ್ನ 1 ಗಂಟೆಗೆ ಕೆಸರು ಗದ್ದೆ ಓಟದ ಸ್ಪರ್ಧೆ ನಡೆಯಲಿದ್ದು, ನಂತರ ಕಿರಿಯರ ಪಾಥಮಿಕ ಶಾಲಾ ಬಾಲಕ, ಬಾಲಕಿಯರಿಗೆ 50ಮೀ ಓಟ, ಹಿರಿಯರ ಪ್ರಾಥಮಿಕ ಶಾಲಾ ಬಾಲಕ, ಬಾಲಕಿಯರಿಗೆ 100ಮೀ ಓಟ, ಪ್ರೌಢಶಾಲಾ ಬಾಲಕ, ಬಾಲಕಿಯರಿಗೆ 200 ಮೀ. ಓಟ, ಪದವಿ ಪೂರ್ವ ಕಾಲೇಜು ಬಾಲಕ, ಬಾಲಕಿಯರಿಗೆ 400 ಮೀ. ಓಟ, ಪದವಿ ಕಾಲೇಜು ಬಾಲಕ, ಬಾಲಕಿಯರಿಗೆ 400 ಮೀ. ಓಟ, 40 ವರ್ಷ ಮೇಲ್ಪಟ್ಟ ಪುರುಷ ಹಾಗೂ ಮಹಿಳೆಯರಿಗೆ 300 ಮೀ. ಓಟದ ಸ್ಪರ್ಧೆ ನಡೆಯಲಿದೆ.

ಅಲ್ಲದೆ ಸಾರ್ವಜನಿಕ ಪುರುಷರ ಹಾಗೂ ಮಹಿಳೆಯರ ಮುಕ್ತ ಓಟ, ಕಗ್ಗೋಡ್ಲು ಗ್ರಾಮಸ್ಥರಿಗೆ ಸಾಂಪ್ರದಾಯಿಕ ನಾಟಿ ಓಟ ನಡೆಯಲಿದೆ. ನಂತರ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಜರುಗಲಿದೆ.

ಹಗ್ಗ-ಜಗ್ಗಾಟ ಸಾರ್ವಜನಿಕ ಪುರುಷರ ವಿಭಾಗಕ್ಕೆ ಮೈದಾನ ಶುಲ್ಕ ರೂ. 1,000 ಮಹಿಳೆಯರ ವಿಭಾಗ ರೂ.750, ವಾಲಿಬಾಲ್ ತಂಡಗಳಿಗೆ ಮೈದಾನ ಶುಲ್ಕ ರೂ.1,000 ಥ್ರೋಬಾಲ್ ಸಾರ್ವಜನಿಕ ಮಹಿಳೆಯರ ವಿಭಾಗಕ್ಕೆ ರೂ.1,000 ನಿಗಧಿಪಡಿಸಲಾಗಿದ್ದು, ಆಸಕ್ತರು ಜು.20ರ ಅಪರಾಹ್ನ 5 ಗಂಟೆಯೊಳಗೆ ತಂಡದ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಸುಕುಮಾರ್ ಮಾಹಿತಿ ನೀಡಿದ್ದಾರೆ.

ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸುವ ತಂಡಗಳಿಗೆ ನಗದು ಹಾಗೂ ಪಾರಿತೋಷಕ ನೀಡಲಾಗುವುದು. ಓಟದ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದವರಿಗೆ ಪಾರಿತೋಷಕ ಮತ್ತು ಪ್ರಶಂಸನಾ ಪತ್ರ ನೀಡಲಾಗುವುದು.

ಹೆಚ್ಚಿನ ಮಾಹಿತಿಗೆ ಪಿ.ಪಿ.ಸುಕುಮಾರ್-94812 13920, ಬಾಳಡಿ ದಿಲೀಪ್-94806 74546, ಎ.ಆರ್.ನೇತ್ರಾವತಿ-94496 79460, ಕೆ.ಕೆ.ಗಣೇಶ್-94497 59029, ಕೂಡಂಡ ಸಾಬ ಸುಬ್ರಮಣಿ – 98455 71290 ಸಂಪರ್ಕಿಸಬಹುದಾಗಿದೆ.

See also  ಬಂಟ್ವಾಳ: ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಅವೈಜ್ಞಾನಿಕ ರೀತಿಯಲ್ಲಿ ಕಸ ಸಂಗ್ರಹಣೆ- ಯು.ಟಿ.ಖಾದರ್ ಭೇಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು