News Kannada
Thursday, June 08 2023
ಮಡಿಕೇರಿ

ಮಡಿಕೇರಿ: ಬಿಜೆಪಿ ಸರ್ಕಾರ ಕೊಡಗಿಗೆ ನೀಡಿದ ಅನುದಾನವನ್ನು ಬಹಿರಂಗ ಪಡಿಸಲಿ

Saritha Poonacha wants BJP government to make public the funds given to Kodagu
Photo Credit : By Author

ಮಡಿಕೇರಿ, ಆ.8: ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ಕಾವೇರಿನಾಡು ಕೊಡಗು ಜಿಲ್ಲೆಗೆ ನೀಡಿದ ಕೊಡುಗೆಗಳೇನು ಹಾಗೂ ಅನುದಾನವೆಷ್ಟು ಎನ್ನುವುದನ್ನು ಬಹಿರಂಗ ಪಡಿಸಲಿ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರೆ ಸರಿತಾ ಪೂಣಚ್ಚ ಒತ್ತಾಯಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಹಾಮಳೆಯಿಂದ ಕೊಡಗು ಸಂಕಷ್ಟಕ್ಕೆ ಸಿಲುಕಿದ್ದರೂ ಪ್ರತ್ಯೇಕವಾಗಿ ವಿಶೇಷ ಅನುದಾನ ತರುವಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂದು ಟೀಕಿಸಿದ್ದಾರೆ. 2018ರಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದಾಗ ಅಂದಿನ ಸಮ್ಮಿಶ್ರ ಸರ್ಕಾರ ತಕ್ಷಣ ಜಾಗ ಗುರುತಿಸಿ 800 ಕ್ಕೂ ಅಧಿಕ ಮನೆಗಳನ್ನು ನಿರ್ಮಿಸಿಕೊಟ್ಟಿತು. ಆದರೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಲ್ಲೆಗೆ ಮಳೆಹಾನಿ ಪರಿಹಾರವಾಗಿ ಸೂಕ್ತ ಆರ್ಥಿಕ ನೆರವು ದೊರೆತ್ತಿಲ್ಲ. ಕೇಂದ್ರ ಸರಕಾರ ಯಾವುದೇ ವಿಶೇಷ ಅನುದಾನ ನೀಡದೆ ಕೊಡಗು ಜಿಲ್ಲೆಯನ್ನು ಕಡೆಗಣಿಸಿದೆ ಎಂದು ಆರೋಪಿಸಿದ್ದಾರೆ.

ಅತಿಮಳೆಯಿಂದಾಗಿ ಸಾವಿರಾರು ಏಕರೆ ಕೃಷಿಭೂಮಿ ಮತ್ತು ಬೆಳೆ ನಾಶವಾಗಿದೆ. ಜಿಲ್ಲೆಯ ರೈತರು ಹಲವು ಬಾರಿ ಪರಿಹಾರಕ್ಕಾಗಿ ಮನವಿ ಮಾಡಿದ್ದರೂ ಇಂದಿಗೂ ಬಹುತೇಕ ಮಂದಿಗೆ ಪರಿಹಾರವೇ ಸಿಕ್ಕಿಲ್ಲ. ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿರುವ ರೈತಾಪಿ ವರ್ಗ ಮಹಾಮಳೆಯ ನಡುವೆ ಕಾಡು ಪ್ರಾಣಿಗಳ ಹಾವಳಿಯನ್ನೂ ಸಹಿಸಿಕೊಳ್ಳಬೇಕಾಗಿದೆ. ಕಳೆದ 3 ವರ್ಷಗಳಿಂದ ನದಿ ನೀರಿನ ಪ್ರವಾಹದ ಆತಂಕದ ನಡುವೆ ಜೀವನ ಸಾಗಿಸುತ್ತಿರುವವರಿಗೆ ಸುರಕ್ಷಿತ ಪ್ರದೇಶದಲ್ಲಿ ಶಾಶ್ವತ ಸೂರು ನೀಡಲು ಸರ್ಕಾರ ಆಸಕ್ತಿ ತೋರಿಲ್ಲ ಎಂದು ಟೀಕಿಸಿದ್ದಾರೆ.

ಸಂಸದ ಪ್ರತಾಪ್ ಸಿಂಹ ಅವರು ಕೊಡಗಿನ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸದೆ ಮೈಸೂರಿಗೆ ಸೀಮಿತವಾಗಿದ್ದಾರೆ. ಮಳೆಹಾನಿಗೆಂದು ಕೇಂದ್ರದಿಂದ ವಿಶೇಷ ಪರಿಹಾರದ ಪ್ಯಾಕೇಜ್ ನ್ನು ತರುವ ಕಾಳಜಿ ತೋರದೆ ಮಲತಾಯಿ ಧೋರಣೆ ಪ್ರದರ್ಶಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಕೊಡಗು ಜಿಲ್ಲೆಗೆ ಕೋಟಿ ಕೋಟಿ ಅನುದಾನ ಬರುತ್ತಿದೆ ಎನ್ನುವ ಜನಪ್ರತಿನಿಧಿಗಳು 2018-19ರ ನಂತರ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ನಷ್ಟವಾಗಿರುವ ರೈತರಿಗೆ ಸಮರ್ಪಕವಾಗಿ ಪರಿಹಾರ ಯಾಕೆ ವಿತರಣೆ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ.
ರಸ್ತೆ, ಕುಡಿಯುವ ನೀರು, ವಿದ್ಯುತ್, ನಿವೇಶನ, ಕಾಡು ಪ್ರಾಣಿಗಳ ಹಾವಳಿ, ರೈತರ ಬೆಳೆ ನಷ್ಟ ಸೇರಿದಂತೆ ಹಲವು ಗಂಭೀರ ಸಮಸ್ಯೆಗಳು ಇಂದಿಗೂ ಜೀವಂತವಾಗಿವೆ.

ನಿರಂತರವಾಗಿ ಗೆಲುವು ಸಾಧಿಸುತ್ತಾ ಬರುತ್ತಿರುವ ಬಿಜೆಪಿ ಪ್ರತಿನಿಧಿಗಳ ಸ್ಪಂದನೆ ನಿರಾಶಾದಾಯಕವಾಗಿದ್ದು, ಮುಂದಿನ ಚುನಾವಣೆಯಲ್ಲಿ ನೊಂದ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸರಿತಾ ಪೂಣಚ್ಚ ಭವಿಷ್ಯ ನುಡಿದಿದ್ದಾರೆ.

See also  ಮಡಿಕೇರಿ: ಕಾವೇರಿ ಬಗ್ಗೆ ಅವಹೇಳನ, ಪೊಲೀಸರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1620
Coovercolly Indresh

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು