News Kannada
Monday, September 25 2023
ಮಡಿಕೇರಿ

ಕೊಡಗಿನ ಗೌರವಕ್ಕೆ ದಕ್ಕೆ ತಂದಿದ್ದಾರೆ: ಕಾಂಗ್ರೆಸ್ ಕಿಡಿ

Kodagu's honour has been tarnished: Congress
Photo Credit :

ಮಡಿಕೇರಿ, ಆ.19: ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆಯುವ ಮೂಲಕ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ವೀರಸೇನಾನಿಗಳ ಶಿಸ್ತಿನ ನಾಡು ಕೊಡಗಿನ ಗೌರವಕ್ಕೆ ದಕ್ಕೆ ತಂದಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಜೆ.ಎಲ್.ಜನಾರ್ಧನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹೆಮ್ಮೆಯ ಸೇನಾಧಿಕಾರಿಗಳು ಜನಿಸಿದ ಈ ಭೂಮಿಯಲ್ಲಿ ಎದೆಯುಬ್ಬಿಸಿ ಧೈರ್ಯದಿಂದ ನಡೆದುಕೊಳ್ಳದೆ ಕಾನೂನು ಉಲ್ಲಂಘಿಸಿ ಹೇಡಿತನ ಪ್ರದರ್ಶಿಸಿರುವುದು ಖಂಡನೀಯ. ಈ ಕೀಳು ಮಟ್ಟದ ವರ್ತನೆಯಿಂದ ಜಿಲ್ಲೆಯ ಜನ ತಲೆ ತಗ್ಗಿಸುವಂತ್ತಾಗಿದೆ ಎಂದು ತಿಳಿಸಿದ್ದಾರೆ.

ಮಳೆಹಾನಿ ಸಂತ್ರಸ್ತರ ಕಷ್ಟಗಳಿಗೆ ಸ್ಪಂದಿಸುವುದಕ್ಕಾಗಿ ಬಂದ ವಿರೋಧ ಪಕ್ಷದ ನಾಯಕನನ್ನು ಅವಮಾನಿಸಿದ್ದು ಸರಿಯಲ್ಲ. ಅನ್ನಭಾಗ್ಯದ ಮೂಲಕ ಬಡವರ ಹಸಿವು ನೀಗಿಸಿದ ಸಿದ್ದರಾಮಯ್ಯರ ಬಗ್ಗೆ ಇಡೀ ರಾಜ್ಯದ ಜನತೆಗೆ ಅಭಿಮಾನವಿದೆ. ಆದರೆ ಸ್ವಾಭಿಮಾನಿಗಳ ಜಿಲ್ಲೆ ಕೊಡಗಿನಲ್ಲಿ ಬಿಜೆಪಿ ಮಂದಿ ನಡೆಸಿಕೊಂಡ ರೀತಿ ಆ ಪಕ್ಷದ ಸಂಸ್ಕೃತಿಯನ್ನು ಬಿಂಬಿಸಿದೆ. ಕೊಡಗು ಮಹಾಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ್ದರೂ ಯಾವುದೇ ಪರಿಹಾರವನ್ನು ತರಲು ಸಾಧ್ಯವಾಗದ ಅಸಮರ್ಥ ಶಾಸಕರನ್ನು ಪ್ರಶ್ನೆ ಮಾಡದ ಬಿಜೆಪಿ ಕಾರ್ಯಕರ್ತರು ಅವಿವೇಕವನ್ನು ಮೆರೆದಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗಾಗಿ ಹೋರಾಟ ನಡೆಸದೆ ಕ್ಷುಲ್ಲಕ ರಾಜಕಾರಣಕ್ಕಾಗಿ ಕೊಡಗಿನ ಗೌರವವನ್ನು ಹರಾಜು ಹಾಕಿದ್ದಾರೆ ಎಂದು ಜನಾರ್ಧನ ಟೀಕಿಸಿದ್ದಾರೆ.

See also  ಬೆಳ್ತಂಗಡಿ: ಕೆಂಪೇಗೌಡ ಜಯಂತಿಯ ಆಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು