News Kannada
Friday, June 09 2023
ಮಡಿಕೇರಿ

ಫಲಪುಷ್ಪ ಪ್ರದರ್ಶನದಲ್ಲಿ ಹಲವು ಆಕರ್ಷಣೆ: ಡಾ.ಬಿ.ಸಿ.ಸತೀಶ

Many attractions in flower show: Dr. B.C. Satheesh
Photo Credit : News Kannada

ಮಡಿಕೇರಿ : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಸೀಟು ಉದ್ಯಾನವನದಲ್ಲಿ ಫೆಬ್ರವರಿ, 03 ರಿಂದ 6 ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಸಾರ್ವಜನಿಕರು, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮನವಿ ಮಾಡಿದ್ದಾರೆ.

ನಗರದ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಫಲಪುಷ್ಪ ಪ್ರದರ್ಶನದಲ್ಲಿ ಹಿಂದಿನ ರಾಜರ ಕಾಲದ ನಾಲ್ಕುನಾಡು ಅರಮನೆ ಕಲಾಕೃತಿ ಒಳಗೊಂಡ ಪುಷ್ಪ ಪ್ರದರ್ಶನ ಆಕರ್ಷಣೀಯವಾಗಿರುತ್ತದೆ ಎಂದರು.

ಫಲಪುಷ್ಪ ಪ್ರದರ್ಶನದಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬ್ಯಾಲೇಟ್ ಯುನಿಟ್, ವಿವಿ ಪ್ಯಾಟ್, ಕಂಟ್ರೋಲ್ ಯೂನಿಟ್ ಮಾದರಿಯ ಹೂವಿನ ಕಲಾಕೃತಿಯಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದರು.

ಕೊಡಗಿನ ಮುಖ್ಯ ಬೆಳೆ ಕಾಫಿಯನ್ನು ಪ್ರತಿಬಿಂಭಿಸಲು ಕಾಫಿ ಕಪ್ ಮತ್ತು ಸಾಸರ್ ಮಾದರಿಯನ್ನು ಹೂವಿನ ಕಲಾಕೃತಿಯಲ್ಲಿ ನಿರ್ಮಾಣ ಮಾಡಲಾಗುತ್ತದೆ. ಜೊತೆಗೆ ಮಕ್ಕಳಿಗೆ ಮನರಂಜನೆ ನೀಡುವಂತಹ ಪೋಟೋ ಪ್ರೇಮ್ ಸೆಲ್ಪಿ ಜೋನ್ ಮಾದರಿಯನ್ನು ಹೂವಿನಲ್ಲಿ ನಿರ್ಮಾಣ ಮಾಡಲಾಗುತ್ತದೆ. ಮಕ್ಕಳಿಗೆ ಮನರಂಜನೆ ನೀಡುವಂತಹ ಸ್ಪೈಡರ್ ಮ್ಯಾನ್ ಮತ್ತಿತರ ಸೆಲ್ಪಿ ಜೋನ್ ಮಾದರಿಗಳನ್ನು ಎಲೆಗಳಿಂದ ತಯಾರಿಸುವ ಪುಷ್ಪ ಪ್ರದರ್ಶನ ಇರಲಿದೆ ಎಂದರು.

ವಿವಿಧ ಗಣ್ಯರ ಕಲಾಕೃತಿಯನ್ನು ತರಕಾರಿ ಮತ್ತು ಹಣ್ಣುಗಳಲ್ಲಿ ಕೆತ್ತನೆ ಮಾಡಲಾಗುವುದು. ವಿವಿಧ ಅಲಂಕಾರಿಕ ಗಿಡಗಳಾದ ಬೊನ್ಸಾಯ್ ಗಿಡಗಳ ಪ್ರದರ್ಶನ ಇಕೆಬಾನೆ ಹೂವಿನ ಜೋಡನೆ, ಆಂಥೋರಿಯಂ ಪ್ರದರ್ಶನ ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ನಗರದ ಗಾಂಧಿ ಮೈದಾನದಲ್ಲಿ ಈಗಾಗಲೇ 60 ಮಳಿಗೆಗಳನ್ನು ನಿರ್ಮಿಸಲಾಗಿದ್ದು, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಕೈಗಾರಿಕಾ ವಾಣಿಜ್ಯ ಇಲಾಖೆ ಹಾಗೂ ಇತರೆ 20 ಇತರೆ ಇಲಾಖೆಗಳಿಗೆ ಮಳಿಗೆ ಕಾಯ್ದಿರಿಸಲಾಗಿದೆ. ಹಾಗೆಯೇ 40 ಮಳಿಗೆಯಲ್ಲಿ ನರ್ಸರಿ ಗಿಡಗಳ ಮಾರಾಟ ಮಳಿಗೆ, ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಯಂತ್ರೋಪಕರಣಗಳ ಮಾರಾಟ ಮಳಿಗೆ ತೆರೆಯಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.

ರೈತರು ಬೆಳೆದಿರುವ ವಿಶಿಷ್ಟವಾದ ಹಣ್ಣುಗಳು, ತರಕಾರಿ, ತೋಟದ ಬೆಳೆಗಳು, ಸಾಂಬಾರ ಬೆಳೆಗಳನ್ನು ಪ್ರದರ್ಶಿಸಲು ಉದ್ದೇಶಿಸಲಾಗಿದೆ. ಅತ್ಯುತ್ತಮ ಪ್ರದರ್ಶನಕ್ಕೆ ಬಹುಮಾನ ನೀಡಲಾಗುವುದು. ಆ ನಿಟ್ಟಿನಲ್ಲಿ ಫೆಬ್ರವರಿ, 03 ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಪ್ರದರ್ಶಿಕೆಗಳನ್ನು ತಂದು ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಸಿ.ಎಂ.ಪ್ರಮೋದ್ ಅವರು ಮಾಹಿತಿ ನೀಡಿ ತೋಟಗಾರಿಕೆಯಲ್ಲಿ ಆಸಕ್ತಿಯಿರುವ ಮಹಿಳೆಯರಿಗೆ ಹಾಗೂ ಸಾರ್ವಜನಿಕರಿಗೆ ಒಣಹೂ ಜೋಡಣೆ, ಬಿಡಿಹೂಗಳ ಜೋಡಣೆ, ಇಕೆಬಾನೆ, ರಂಗೋಲಿ ಸ್ಪರ್ಧೆಗಳನ್ನು ರಾಜಾಸೀಟಿನ ಒಳಭಾಗದಲ್ಲಿ ಆಯೋಜಿಸಲಾಗುವುದು. ಆಸಕ್ತರು ಫೆಬ್ರವರಿ, 03 ರಂದು ಬೆಳಗ್ಗೆ 10 ಗಂಟೆಗೆ ರಾಜಾಸೀಟು ಉದ್ಯಾನವನದಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೋರಿದರು.

ಕರ್ನಾಟಕ ದ್ರಾಕ್ಷಿರಸ ಮಂಡಳಿ, ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಗಾಂಧಿ ಮೈದಾನದಲ್ಲಿ ‘ವೈನ್ ಉತ್ಸವ’ವನ್ನು ಆಯೋಜಿಸಲಾಗುತ್ತದೆ.

See also  ಕೊಡಗು: ಕೊರೋನಾ ಸೋಂಕು, ಸೋಮವಾರ ಪಾಸಿಟಿವಿಟಿ ದರ ಶೇ.2.60ರಷ್ಟ ಏರಿಕೆ

ಇದರ ಪ್ರಯುಕ್ತ ಗಾಂಧಿ ಮೈದಾನದಲ್ಲಿ ಸ್ಥಳೀಯ ಹೋಮ್ ಮೇಡ್ ವೈನ್/ ಜ್ಯೂಸ್ ಹಾಗೂ ವೈನ್ ಬೋರ್ಡ್ ವತಿಯಿಂದ ಬ್ರಾಂಡೆಡ್ ವೈನ್‍ಗಳ ಪ್ರದರ್ಶನ ಹಾಗೂ ಮಾರಾಟ, ಪರೀಕ್ಷೆ ಮತ್ತು ರುಚಿ ವ್ಯವಸ್ಥೆಯನ್ನು ಸಾರ್ವಜನಿಕರಿಗೆ ಆಯೋಜಿಸಲಾಗಿದೆ.

ಈ ಬಾರಿ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಪ್ರತಿ ದಿನ 15 ಸಾವಿರ ಹೆಚ್ಚು ಜನರು ಭೇಟಿ ನೀಡುವ ಸಾಧ್ಯತೆ ಇದೆ ಎಂದು ಪ್ರಮೋದ್ ಅವರು ತಿಳಿಸಿದರು. ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ, ಇತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು