News Kannada
Friday, March 31 2023

ಮಡಿಕೇರಿ

ಮಡಿಕೇರಿ: ದೊರೆಯದ ನಿವೇಶನ, ಉಗ್ರ ಪ್ರತಿಭಟನೆಗೆ ನಿರ್ಧಾರ

Madikeri: A decision has been taken to hold violent protests
Photo Credit : News Kannada

ಮಡಿಕೇರಿ: ಪೊನ್ನಂಪೇಟೆ ತಾಲೂಕು ಪಂಚಾಯಿತಿ ಆವರಣದಲ್ಲಿ ಬುಡಕಟ್ಟು ಸಮುದಾಯದವರು ಕಳೆದ ಏಳು ತಿಂಗಳಿನಿಂದ ನಿವೇಶನಕ್ಕಾಗಿ ಅಹೋರಾತ್ರಿ ಧರಣಿ ನಡೆಸುತ್ತಿದ್ದು ಇದುವರೆಗೆ ಜಿಲ್ಲಾಡಳಿತವಾಗಲಿ ಜನ ಪ್ರತಿನಿಧಿಗಳಾಗಿ ತಮ್ಮ ಕೋರಿಕೆಗೆ ಮನಣ್ಣೆ ನೀಡದರಿಂದ ಇಂದಿನಿಂದ ಉಗ್ರ ಸ್ವರೂಪದ ಪ್ರತಿಭಟನೆ ನಡೆಸಲು ಪ್ರತಿಭಟನೆಕಾರರು ನಿರ್ಧರಿಸಿದ್ದಾರೆ.

ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನಲ್ಲಿ 4500ಕ್ಕೂ ಹೆಚ್ಚು ಕುಟುಂಬಗಳು ನಿವೇಶನರಹಿತರಾಗಿದ್ದು ಲೈನ್ ಮನೆಯಲ್ಲಿ ವಾಸಿಸುತ್ತಿರುವವರಿಗೆ ನಿವೇಶನ ನೀಡಲು ಒತ್ತಾಯಿಸಿ ಧರಣಿ ನಡೆಸುತ್ತಿದ್ದಾರೆ.

ಈಗಾಗಲೇ ಐಟಿಡಿಪಿ ಇಲಾಖೆಯಲ್ಲಿ 76 ಎಕರೆ ಜಾಗ ಬುಡಕಟ್ಟು ಸಮುದಾಯದ ನಿವೇಶನಕ್ಕಾಗಿ ಕಾಯ್ದಿರಿಸಲಾಗಿದೆ, ಆದರೆ ಇದುವರೆಗೂ ಕೂಡ ಜಾಗವನ್ನು ವಿಲೇವಾರಿ ಮಾಡದೆ ಇಲಾಖೆಯ ಅಧಿಕಾರಿಗಳು ಕರ್ತವ್ಯ ಪಾಲನೆ ಮಾಡುತ್ತಿಲ್ಲ ಎಂದು ಸಂಘದ ಅಧ್ಯಕ್ಷರಾದ ಗಪ್ಪು ಧೂರಿಕೊಂಡಿದ್ದಾರೆ.

ಪೊನ್ನಂಪೇಟೆ ತಾಲೂಕಿನಲ್ಲಿ ಒಟ್ಟು 456 ಬುಡಕಟ್ಟು ಸಮುದಾಯದ ಕುಟುಂಬಗಳು ನಿವೇಶನಕ್ಕಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಹಾಗೆ ತಾಲೂಕಿನ ಎಲ್ಲಾ ಪಂಚಾಯಿತಿಗಳಲ್ಲೂ ಕೂಡ ಅರ್ಜಿಗಳನ್ನು ನೀಡಲಾಗಿದೆ.

See also  ಮಡಿಕೇರಿ: “ಲೇಲುಳ್ಳಿ ಲೇ ಲೇ” ಕೊಡವ ಆಲ್ಬಮ್ ಸಾಂಗ್‌ನ ಪೋಸ್ಟರ್ ಬಿಡುಗಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು