ವಿರಾಜಪೇಟೆ: ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಘಾತಕಾರಿ ಘಟನೆಯೊಂದು ಶುಕ್ರವಾರ ಸಂಭವಿಸಿದೆ. ಆರೋಗ್ಯ ಕೇಂದ್ರದ ಆವರಣದಲ್ಲೇ ಗರ್ಭಿಣಿ ಶಿಶುವಿಗೆ ಜನ್ಮ ನೀಡಿದ್ದಾರೆ.
ಗುಹ್ಯ ಗ್ರಾಮದ ನಿವಾಸಿ ಸುಬ್ರಮಣಿ ಕಾಫಿ ತೋಟದ ಲೈನ್ ಮನೆಯ ಕಾರ್ಮಿಕ ಮಹಿಳೆ ಸಂಗೀತಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಬೆಳಗ್ಗೆ 6 ಗಂಟೆಗೆ ಆರೋಗ್ಯ ಕೇಂದ್ರಕ್ಕೆ ಅವರನ್ನು ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಕೇಂದ್ರದ ಬಾಗಿಲು ಮುಚ್ಚಿತ್ತು. ಸಿಬ್ಬಂದಿ ಇಲ್ಲದೆ ಸೌಲಭ್ಯವೂ ಸಿಗದೇ ಆರೋಗ್ಯ ಕೇಂದ್ರದ ಆವರಣದಲ್ಲಿ ಅವರು ಮಗುವಿಗೆ ಜನ್ಮ ನೀಡಿದ್ದಾರೆ.
ಆಸ್ಪತ್ರೆ ಬಾಗಿಲಲ್ಲೇ ಹೆರಿಗೆ ಆಗಿದ್ದು, ರಕ್ತದ ಮಡುವಿನಲ್ಲಿದ್ದ ತಾಯಿ, ಶಿಶುವನ್ನು ನಂತರ ಆರೋಗ್ಯ ಕೇಂದ್ರದ ಸಿಬ್ಬಂದಿ ದಾಖಲಿಸಿಕೊಂಡಿದ್ದಾರೆ.