News Kannada
Friday, March 31 2023

ಮಡಿಕೇರಿ

ಮಡಿಕೇರಿ: ಆಕಾಶವಾಣಿಯಲ್ಲಿ ರೇಡಿಯೋ ಕಿಸಾನ್ ದಿನ ಆಚರಣೆ

Madikeri: Radio Kisan Day celebrated on All India Radio
Photo Credit : News Kannada

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರೇಡಿಯೋ ಪರಿಣಾಮಕಾರಿ ಮಾಧ್ಯಮವಾಗಿದೆ ಎಂದು ಕೃಷಿ ನಿರ್ದೇಶಕರಾದ ಶಬನಾ ಎಂ. ಶೇಕ್ ಅವರು ನುಡಿದಿದ್ದಾರೆ.

ಮಡಿಕೇರಿ ಆಕಾಶವಾಣಿ ಕೇಂದ್ರವು ಹಮ್ಮಿಕೊಂಡಿದ್ದ ರೇಡಿಯೋ ಕಿಸಾನ್ ದಿನದ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದರು. ಕೃಷಿ ಪ್ರಧಾನವಾದ ಈ ಜಿಲ್ಲೆಯಲ್ಲಿ ಕೃಷಿಕರಿಗೆ ಉಪಯುಕ್ತವಾದ ವಿಚಾರಗಳು ಪ್ರಸಾರವಾಗುತ್ತಿದ್ದು, ಕೃಷಿ ಇಲಾಖೆಯ ಯೋಜನೆಗಳ ಮಾಹಿತಿ ತಿಳಿಸಲು ಅನುಕೂಲವಾಗಿದೆ. ಇತರೇ ಜಿಲ್ಲೆಗಳಿಗಿಂತ ಕೊಡಗಿನ ಪರಿಸರ ಭಿನ್ನವಾಗಿದೆ. ಇಲ್ಲಿಯೂ ಸಾಧಕ ರೈತರು ಇದ್ದಾರೆ. ಕೃಷಿ ಇಲಾಖೆಯು ಹಾಲಿ ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ ನೀಡುತ್ತಿದ್ದು ಕೇಂದ್ರ ಸರ್ಕಾರದ ಕೃಷಿ ಸಮ್ಮಾನ್ ಯೋಜನೆಗೆ ರೈತರು ಹೆಸರು ನೋಂದಾಯಿಸಿಕೊಂಡು ಪ್ರಯೋಜನ ಪಡೆಯುವಂತಾಗಬೇಕು ಎಂದು ಕರೆ ನೀಡಿದರು.

ಕೊಡಗು ಜಿ.ಪಂ.ಉಪ ಕಾರ್ಯದರ್ಶಿ ಜಿ.ಧನರಾಜ್ ಅವರು ಮಾತನಾಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯಡಿ ನೂರಾರು ಕಾಮಗಾರಿ ಕೈಗೆತ್ತಿಕೊಳ್ಳಲು ಅವಕಾಶ ಇದೆ. ರೈತರ ಹತ್ತಾರು ಕೆಲಸಗಳಿಗೆ ಈ ಮೂಲಕ ಸಹಾಯವಾಗಲಿದೆ ಎಂದರು.

ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥರಾದ ಡಾ.ವಿಜಯ್ ಅಂಗಡಿ ಅವರು ಪ್ರಾಸ್ತವಿಕವಾಗಿ ಮಾತನಾಡಿ 1965 ರಿಂದ ಕೃಷಿ ಕಾರ್ಯಕ್ರಮಗಳು ಆಕಾಶವಾಣಿಯಲ್ಲಿ ಬಿತ್ತರವಾಗುತ್ತಿವೆ. ರೈತರಿಗೆ ಪ್ರತೀ ದಿನವೂ ಕೃಷಿ ಕುರಿತ ಮಾಹಿತಿಯನ್ನು ನೀಡಲಾಗುತ್ತಿದೆ. 2004ರ ಫೆಬ್ರವರಿ 15 ರಂದು ಭಾರತ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಮಂತ್ರಾಲಯದ ಪ್ರಾಯೋಜಕತ್ವದಲ್ಲಿ ಕೃಷಿ ಕಾರ್ಯಕ್ರಮಗಳ ಪ್ರಸಾರವು ನೆಡೆಯುತ್ತಿದೆ. ಈ ಹಿನ್ನಲೆಯಲ್ಲಿ ಫೆಬ್ರವರಿ 15 ರಂದು ರೇಡಿಯೋ ‘ರೈತ ದಿನ’ ಆಚರಿಸಲಾಗುತ್ತಿದೆ. ದೇಶದಲ್ಲಿ 96 ಆಕಾಶವಾಣಿ ಕೇಂದ್ರಗಳಿಂದ ಕಿಸಾನ್ ವಾಣಿ ಪ್ರಾಯೋಜಿತ ಕಾರ್ಯಕ್ರಮಗಳು ಮೂಡಿಬರುತ್ತಿವೆ. ರೈತರಿಗೆ ಹತ್ತಾರು ಸಂಗತಿಗಳು ಸಿಗುವಂತಾಗಲು ಪ್ರಸಾರದ ಸಂಯೋಜನೆ ಮಾಡಲಾಗಿದೆ. ರೈತರಿಗೆ ರೇಡಿಯೋ ಈಗಲೂ ನೆಚ್ಚಿನ ಮಧ್ಯಮವಾಗಿದೆ ಎಂದು ತಿಳಿಸಿದರು.

ರೇಡಿಯೋ ಕಿಸಾನ್ ದಿವಸದ ನಿಮಿತ್ತ ಎಂ ಬಾಡಗ ಗ್ರಾಮದ ಬಾರಿಯಂಡ ಸಂಜನ್ ಪೆÇನ್ನಪ್ಪ, ಮೈತಾಡಿಯ ಎಚ್.ಕೆ ಹನೀಫ್, ಚೇರಂಗಾಲದ ಮೂಲೆಮಜಲು ಗಣೇಶ್ ಹಾಗೂ ಗರಂಗದೂರಿನ ಕೆ ಎಸ್ ಮಂಜುನಾಥ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ರೈತ ಹನೀಫ್ ಅವರು ಮಾತಾಡಿ ರೇಡಿಯೋದಲ್ಲಿ ಬರುವ ಕೃಷಿ ಕಾರ್ಯಕ್ರಮಗಳು ನಮ್ಮ ಜೀವನವನ್ನು ಬದಲಿಸುತ್ತವೆ, ಸ್ಫೂರ್ತಿ ನೀಡುತ್ತವೆ ಎಂದರು.

ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಮಾತನಾಡಿ ಆಕಾಶವಾಣಿಯಿಂದ ಕೃಷಿಗೆ ಸಂಬಂಧಿಸಿದಂತೆ ಹಲವು ಕಾರ್ಯಕ್ರಮಗಳು ಭಿತ್ತರವಾಗುತ್ತಿದ್ದು, ಮಾಹಿತಿ ಪಡೆದು ಉತ್ತಮ ಬೆಳೆ ಬೆಳೆಯುವಂತಾಗಬೇಕು ಎಂದರು.

ಸಂಜೆ 6.50 ರಿಂದ ನೇರ ಪ್ರಸಾರದಲ್ಲಿ ಅಭಿನಂದಿಸಿದ ರೈತರ ಅಭಿಪ್ರಾಯಗಳನ್ನು ಪ್ರಸಾರ ಮಾಡಲು ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಆಕಾಶವಾಣಿಯ ಕೂಪದಿರ ಶಾರದಾ ನಂಜಪ್ಪ, ಸುಬ್ರಾಯ ಸಂಪಾಜೆ, ಆನಂದನ್, ಶಿವಾನಂದನ್, ಪಂಕಜ್ ಕುಡ್ತರ್‍ಕರ್ ಹಾಗೂ ಸಿಬ್ಬಂದಿ ಇದ್ದರು.

ರೈತ ಕುಟುಂಬದ ಸದಸ್ಯರೂ ಆಗಮಿಸಿದ್ದು ವಿಶೇಷವಾಗಿತ್ತು. ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷದ ಹಿನ್ನೆಲೆಯಲ್ಲಿ ರಾಗಿ ಅಂಬಲಿಯ ಜೊತೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು. ರೈತರಿಗೆ ಚಕ್ರಮುನಿ, ಲೆಮನ್ ಗ್ರಾಸ್, ಪೆಪ್ಪರ್ ಮಿಂಟ್, ಪಟಾವಳಿ ಕಬ್ಬಿನ ಗಿಡಗಳನ್ನೂ ಕಾಣಿಕೆಯಾಗಿ ಕೊಡಲಾಯಿತು. ಲೆಮನ್ ಗ್ರಾಸ್ ನ ಪಾನೀಯವನ್ನು ಪರಿಚಯಿಸಲಾಯಿತು.

See also  ಬಂಟ್ವಾಳ: ಬಜಾರ್ ಸಮೂಹ ಸಂಸ್ಥೆಯ ಆಡಳಿತ ಪಾಲುದಾರ ಡಾ.ಎಸ್.ಎಂ. ಗೋಪಾಲಕೃಷ್ಣ ಆಚಾರ್ಯ ನಿಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು