News Kannada
Saturday, March 25 2023

ಮಡಿಕೇರಿ

ಮಡಿಕೇರಿ: ಸವಿತಾ ಮಹರ್ಷಿ ಅವರ ಆದರ್ಶ ಪ್ರತಿಯೊಬ್ಬರೂ ತಿಳಿಯಿರಿ- ಕೆ.ಜಿ.ಬೋಪಯ್ಯ

Madikeri: Everyone should know the ideals of Savita Maharshi: K.G. Bopaiah
Photo Credit : News Kannada

ಮಡಿಕೇರಿ, ಫೆ.27: ಸವಿತಾ ಸಮಾಜವು ಅತ್ಯಂತ ಶ್ರೀಮಂತ ಪರಂಪರೆ ಹೊಂದಿದ್ದು, ಆ ನಿಟ್ಟಿನಲ್ಲಿ ಸವಿತಾ ಮಹರ್ಷಿಯವರ ಆದರ್ಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಶಾಸಕರಾದ ಕೆ.ಜಿ.ಬೋಪಯ್ಯ ಅವರು ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ‘ಶ್ರೀ ಸವಿತಾ ಮಹರ್ಷಿ ಜಯಂತಿ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶ್ರೀ ಸವಿತಾ ಮಹರ್ಷಿಯು ರಥಸಪ್ತಮಿಯ ದಿನ ಮಾಘ ಮಾಸದ ಶುಕ್ಲ ಪಕ್ಷದಲ್ಲಿ ಜನಿಸಿದರು ಎಂದು ಕೆ.ಜಿ.ಬೋಪಯ್ಯ ಅವರು ತಿಳಿಸಿದರು.

ಸವಿತಾ ಸಮಾಜವು ಸಮಾಜದಲ್ಲಿ ವಿಶಿಷ್ಟ ಇತಿಹಾಸ ಹೊಂದಿದೆ. ಶಿವನ ದಿವ್ಯದೃಷ್ಟಿಯಲ್ಲಿ ಜನ್ಮ ತಾಳಿದ ಸವಿತಾ ಮಹರ್ಷಿ ಅವರು ಪುರಾಣ ಗ್ರಂಥದಲ್ಲಿ ತಮ್ಮದೇ ಆದ ಸ್ಥಾನ ಹೊಂದಿದ್ದಾರೆ ಎಂದು ಶಾಸಕರು ಹೇಳಿದರು.

ಸವಿತಾ ಮಹರ್ಷಿಗಳು ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಮಹಾನ್ ಯುಗಪುರುಷ, ಸವಿತಾ ಮಹರ್ಷಿ ಅವರು ಸಮಾಜ ಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ. ಇಂತಹ ಮಹಾತ್ಮರ ಜಯಂತಿಯನ್ನು ಆಚರಿಸುವ ಮೂಲಕ ಸರ್ಕಾರ ಇವರ ಆದರ್ಶಗಳ ಹಾದಿಯಲ್ಲಿ ನಡೆಯಲು ಬೆಳಕು ತೋರಿಸಿದೆ. ಸವಿತಾ ಸಮಾಜದ ಬದುಕು ಮಹರ್ಷಿಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಕರೆ ನೀಡಿದರು.

ಸವಿತಾ ಸಮಾಜದ ಜಿಲ್ಲಾ ಅಧ್ಯಕ್ಷರಾದ ದೊರೇಶ ಅವರು ಮಾತನಾಡಿ ಅಪಾರ ಜ್ಞಾನ ಭಂಡಾರ ಹೊಂದಿದ್ದ ಸವಿತಾ ಮಹರ್ಷಿ ಅವರು ನಾಲ್ಕನೇ ವೇದವಾದ ಸಾಮವೇದ ರಚಿಸಿದ್ದಾರೆ. ಇವರ ಮಗಳಾದ ಗಾಯತ್ರಿ ದೇವಿಯು ಶ್ರೇಷ್ಠ ಮಂತ್ರವಾದ ಗಾಯತ್ರಿ ಮಂತ್ರವನ್ನು ರಚಿಸಿದ್ದಾರೆ ಎಂದರು.

ತಾಲ್ಲೂಕು ಸವಿತಾ ಸಮಾಜದ ಕ್ರೀಡಾ ಅಧ್ಯಕ್ಷರಾದ ಮಧು ಚೆಟ್ಟಿಮಾನಿ, ಜಿಲ್ಲಾ ಸವಿತಾ ಸಮಾಜದ ಉಪಾಧ್ಯಕ್ಷರಾದ ಶಿವಾಜಿ, ತಾಲ್ಲೂಕು ಸವಿತಾ ಸಮಾಜದ ಅಧ್ಯಕ್ಷರಾದ ಮಧು ಎಂ.ಟಿ.,(ಮಡಿಕೇರಿ), ಶಿವಣ್ಣ(ಸೋಮವಾರಪೇಟೆ), ಜಗದೀಶ ಭಂಡಾರಿ (ಕುಶಾಲನಗರ), ದೇವರಾಜ್(ವಿರಾಜಪೇಟೆ), ಮಹಿಳಾ ಘಟಕದ ಅಧ್ಯಕ್ಷರಾದ ವಸಂತಿ ಆರ್.ಬಿ., ತಾ. ಸವಿತಾ ಸಮಾಜದ ನಗರಾಧ್ಯಕ್ಷರಾದ ಟಿ.ಜಿ.ಸಂದೇಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಇತರರು ಇದ್ದರು.

ಅವಿನಾಶ್ ಬೊಟ್ಲಪ್ಪ ನಿರೂಪಿಸಿದರು. ಜೆಸಿಕಾ ಮತ್ತು ಸ್ಪರ್ಶ ಪ್ರಾರ್ಥಿಸಿದರು. ಮಣಜೂರು ಮಂಜುನಾಥ್ ಸ್ವಾಗತಿಸಿ, ವಂದಿಸಿದರು.

See also  ಗೋಣಿಕೊಪ್ಪ ದಸರಾ ಆಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು