ಮಡಿಕೇರಿ: ಗುರುವಾರ ಬೆಳಗ್ಗೆ ಕೊಳಕೇರಿ ಮಾರ್ಗವಾಗಿ ನಾಪೋಕ್ಲು ಮಡಿಕೇರಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ವೇಗದ ಚಾಲನೆ ಯಿಂದ ನಿಯಂತ್ರಣ ತಪ್ಪಿ ಕೋಟೇರಿ ಮುಖ್ಯ ರಸ್ತೆಯ ಬದಿಯ ಹಳ್ಳಕ್ಕೆ ಬಿದ್ದ ಘಟನೆ ನಡೆದಿದೆ.
ಈ ವೇಳೆ ಶಾಲಾ ಮಕ್ಕಳು ಸೇರಿದಂತೆ ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ನಾಪೋಕ್ಲು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆಗೆ ಕಳುಹಿಸಲಾಗಿದೆ.
ಚಾಲಕನ ವೇಗದ ಚಾಲನೆ ಮತ್ತು ಇಲಾಖೆ ರಸ್ತೆ ನಿರ್ಮಾಣ ಸಂದರ್ಭ, ಬದಿಯಲ್ಲಿ ತಡೆಗೋಡೆ ನಿರ್ಮಾಣ ಮಾಡದಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಲೋಕೋಪಯೋಗಿ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯ ನಾಗರಿಕರು ಗಂಭೀರ ಆರೋಪ ಮಾಡಿದ್ದಾರೆ.