News Kannada
Sunday, June 04 2023
ಮಡಿಕೇರಿ

ಚಿನ್ನದ ಉಳುಮೆಯ ಹೊನ್ನಾರಿಗೆ ರೈತರ ಸಿದ್ಧತೆ

Farmers prepare for golden ploughing honnari
Photo Credit : News Kannada

ಕೊಡಗು: ಉತ್ತರ ಕೊಡಗಿನ ಬಯಲುಸೀಮೆ ಪ್ರದೇಶವಾದ ತೊರೆನೂರು ಮತ್ತು ಶಿರಂಗಾಲ ಗ್ರಾಮದಲ್ಲಿ ಯುಗಾದಿ ಹಬ್ಬದ ಅಂಗವಾಗಿ ರೈತರು ಜನಪದ ಸಂಸ್ಕೃತಿಯ ಪ್ರತೀಕವಾದ ಹೊನ್ನಾರು ಉತ್ಸವ (ಚಿನ್ನದ ಉಳುಮೆ)ವನ್ನು ಸಂಭ್ರಮ ಸಡಗರದೊಂದಿಗೆ ಆಚರಿಸುತ್ತಾರೆ.

ಯುಗಾದಿ ಹಬ್ಬವು ಗ್ರಾಮೀಣ ಪ್ರದೇಶದ ರೈತರ ಪಾಲಿಗೆ ಹೊಸ ಸಂವತ್ಸರವಾಗಿರುವುದರಿಂದ ಹಬ್ಬದ ಮೂರನೇ ದಿನಕ್ಕೆ ರೈತಾಪಿ ವರ್ಗವು ಹೊಸ ಪಂಚಾಂಗದ ಪ್ರಕಾರ ಹೊನ್ನಾರು ಉತ್ಸವವನ್ನು ಸಾಂಪ್ರ ಯಿಕವಾಗಿ ಆಚರಿಸುವುದು ರೂಢಿಯಾಗಿದೆ. ಉತ್ಸವದ ದಿನ ಮುಂಜಾನೆ ರೈತರು ತಮಗೆ ಸೇರಿದ ಎತ್ತು ಹಾಗೂ ದನಕರುಗಳನ್ನು ನದಿಯ ನೀರಿನಿಂದ ತೊಳೆದು ಅವುಗಳ ಗವುಸು ಹಾಗೂ ಕೊಂಬಿಗೆ ಹಣಸು ವಸ್ತ್ರಾಂಲಕಾರದಿಂದ ಸಿಂಗರಿಸಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ತಾವು ಹೊಸ ಉಡುಗೆ-ತೊಡಿಗೆ ತೊಟ್ಟು ತಮ್ಮ ಕೃಷಿ ಪರಿಕರಗಳಾದ ನೇಗಿಲು, ನೊಗ, ಎತ್ತಿನಗಾಡಿಯೊಂದಿಗೆ ಹತ್ಯಾರುಗಳನ್ನು ಒಪ್ಪವಾಗಿ ಜೋಡಿಸಿ ಪೂಜೆ ಸಲ್ಲಿಸುತ್ತಾರೆ.

ಮನೆಗಳಲ್ಲಿ ಉತ್ಸವದ ಅಂಗವಾಗಿ ಹೋಳಿಗೆ, ಪಾಯಿಸ ಮತ್ತಿತರ ಭಕ್ಷ್ಯ ಭೋಜನವನ್ನು ತಯಾರಿಸಿ ತಮ್ಮ ಜಾನುವಾರುಗಳಿಗೆ ತಿನ್ನಿಸಿ, ತಾವು ಸೇವಿಸಿ ಸಂಭ್ರಮಿಸುತ್ತಾರೆ. ಅಂದು ಹೊಸ ಪಂಚಾಂಗದಂತೆ ಗ್ರಾಮದ ಹಿರಿಯ ವ್ಯಕ್ತಿ ನೇಗಿಲು ಮತ್ತು ಭೂಮಿಗೆ ಪೂಜೆ ಸಲ್ಲಿಸಿ ಹೊನ್ನಾರು (ಚಿನ್ನದ ಉಳುಮೆ) ಹೂಡಿ ವರ್ಷಧಾರೆ ಉಳುಮೆಗೆ ಚಾಲನೆ ನೀಡುತ್ತಾರೆ. ಬಳಿಕ ಮಂಗಳವಾದ್ಯಗಳೊಂದಿಗೆ ಮೆರವಣಿಗೆ ಹೊರಟ ಹೊನ್ನಾರುಗಳು ಗ್ರಾಮದ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿ ನಂತರ ಉಳುಮೆ ಆರಂಭಿಸಿ ಈ ವರ್ಷ ಉತ್ತಮ ಮಳೆ ಬೆಳೆಯಾಗಲಿ ಎಂದು ಪ್ರಕೃತಿಯನ್ನು ಪೂಜಿಸಲಾಗುತ್ತದೆ. ಆ ನಂತರ ರೈತರು ತಮ್ಮ ತಮ್ಮ ಜಮೀನಿಗೆ ತೆರಳಿ ಉಳುಮೆ ಆರಂಭಿಸುತ್ತಾರೆ.

ಉತ್ತರ ಕೊಡಗಿನ ಶಿರಂಗಾಲ, ತೊರೆನೂರು, ಮಣಜೂರು, ಕೂಡಿಗೆ, ಮದಾಲಪುರ, ಹುಲುಸೆ, ಭುವನಗಿರಿ, ಮೊದಲಾದ ಗ್ರಾಮಗಳಲ್ಲಿ ಜನಪದ ಸಂಸ್ಕೃತಿಯ ಹೊನ್ನಾರು ಉತ್ಸವವನ್ನು ಹಿಂದಿನ ಕಾಲದಿಂದಲೂ ನಡೆಸಿಕೊಂಡು ಬರಲಾಗುತ್ತಿದೆ. ಎತ್ತುಗಳ ಬದಲಿಗೆ ಯಂತ್ರವನ್ನು ಬಳಸುವ ಇಂದಿನ ಆಧುನಿಕ ಯುಗದಲ್ಲಿಯೂ ರೈತರು ಹಬ್ಬವನ್ನು ಆಚರಿಸುತ್ತಿರುವುದು ವಿಶೇಷವಾಗಿದೆ.

See also  ಮಡಿಕೇರಿ: ವೀರಶೈವ ಲಿಂಗಾಯತ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡದಂತೆ ಆಗ್ರಹ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು