News Kannada
ಮಡಿಕೇರಿ

ಮಡಿಕೇರಿ: ಸವಲತ್ತುಗಳನ್ನು ನೇರವಾಗಿ ನಿಮ್ಮ ಮನೆ ಬಾಗಿಲಿಗೆ ತಲುಪಿಸುವ ಜವಾಬ್ದಾರಿ ನನ್ನದು

It is my responsibility to deliver the benefits directly to your doorstep.
Photo Credit : News Kannada

ಮಡಿಕೇರಿ: ಸರ್ಕಾರದ ಸವಲತ್ತುಗಳನ್ನು ನೇರವಾಗಿ ನಿಮ್ಮ ಮನೆ ಬಾಗಿಲಿಗೆ ತಲುಪಿಸುವ ಜವಾಬ್ದಾರಿ ನನ್ನದು, ಒಂದು ಚಿಕ್ಕಸು ಹಣವು ಕೂಡ ದುರುಪಯೋಗವಾಗದಂತೆ ಬಡವರ ಅಭಿವೃದ್ಧಿಗೆ ಮೀಸಲಿಟ್ಟ ಹಣ ಬಡವರಿಗೆ ತಲುಪುವಂತೆ ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ ಎಸ್ ಪೊನ್ನಣ್ಣನವರು ಹೇಳಿದರು.

ಅವರು ಗೋಣಿಕೊಪ್ಪಲ್ಲಿನಲ್ಲಿ ನಡೆದ ಅಸಂಘಟಿತ ವಲಯ ಕಾರ್ಮಿಕರ ಸಮಾವೇಶದಲ್ಲಿ ಮಾತನಾಡಿದರು.

ಅಸಂಘಟಿತ ಕಾರ್ಮಿಕರ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸುತ್ತೇನೆ, ಈ ಬಗ್ಗೆ ಪ್ರಣಾಳಿಕೆಯಲ್ಲೂ ಕೂಡ ನಾನು ಪ್ರಕಟಿಸಿದ್ದೇನೆ ಬಡವರ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷ ಇದೆ, ಮಹಿಳೆಯರ ಅಭಿವೃದ್ಧಿಗಾಗಿ ಮಾಸಿಕ 2000 ಅನ್ನು, ವಿದ್ಯಾರ್ಥಿಗಳ ಜೀವನ ಮಟ್ಟವನ್ನು ಸುಧಾರಿಸಲು ಉಚಿತ ವಿದ್ಯುತ್ ಹಾಗೂ ನೆರವು ಯೋಜನೆಗಳು,ಇವೆಲ್ಲವೂ ಗ್ಯಾರೆಂಟಿ ಕಾರ್ಡ್ ನೊಂದಿಗೆ ನಿಮ್ಮ ಮನೆಗೆ ಸೇರಿದೆ. ನಿಮ್ಮ ನಿಮ್ಮ ಖಾತೆಗೆ ನೇರವಾಗಿ ಈ ಹಣ ಸಂದಾಯವಾಗುತ್ತದೆ. ಈ ಬಾರಿ ಕ್ಷೇತ್ರದಲ್ಲಿ ಬದಲಾವಣೆಯ ಅಗತ್ಯತೆಯನ್ನು ಎಲ್ಲರೂ ಅರಿತುಕೊಂಡಿದ್ದಾರೆ.

ಒಂದು ಬಾರಿ ನನಗೆ ಸೇವೆ ಮಾಡಲು ಅವಕಾಶ ಮಾಡಿಕೊಡಿ, ಸಮಾನತೆಯ ಸಮೃದ್ಧ ಬಾಳ್ವೆಯನ್ನು ನಿಮಗೆ ನೀಡುತ್ತೇನೆ. ಜಾತಿ ಮತ ಧರ್ಮದಿಂದ ಹೊರತಾಗಿ ಎಲ್ಲರ ನೋವು ನಲುವಿಗೆ ಸ್ಪಂದಿಸಲು ನನಗೊಂದು ಅವಕಾಶ ಮಾಡಿಕೊಡಿ ಎಂದು ಈ ಸಂದರ್ಭ ಹೇಳಿದರು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ನ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಮಾಚಯ್ಯ ಹೋಬಳಿ ಅಧ್ಯಕ್ಷ ನವೀನ್ ಮತ್ತಿತರು ಉಪಸ್ಥಿತರಿದ್ದರು.

See also  ಕರ್ನಾಟಕ ಸಿರಿ-2022 ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಪಡೆದ ಕೆ.ಗಣೇಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು