News Karnataka Kannada
Thursday, April 25 2024
ಮಡಿಕೇರಿ

ಕೊಡಗು: ಕಾರ್ಯಕರ್ತರ ಬೆಂಬಲದಿಂದ ಬಿಜೆಪಿ ಗೆಲುವು – ಅಪ್ಪಚ್ಚು ರಂಜನ್

Bjp's victory in Kodagu district is certain with the support of party workers: MP Appachu Ranjan
Photo Credit : News Kannada

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾರ್ಯಕರ್ತರ ಬೆಂಬಲದಿಂದ ಬಿಜೆಪಿ ಗೆಲವು ಖಂಡಿತಾ ಎಂದು ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.

ಮಡಿಕೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊಡಗಿನ ಎರಡೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲವು ಶತಸಿದ್ದ. ಏಕೆಂದರೆ, ಕಾರ್ಯಕರ್ತರು ತಳಮಟ್ಟದಿಂದಲೇ ಬಿಜೆಪಿ ಗೆಲುವಿಗೆ ಮುಂದಾಗಿದ್ದಾರೆ. ಎರಡೂ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ನಿಂದ ಟೂರಿಂಗ್ ಅಭ್ಯರ್ಥಿಗಳಿದ್ದಾರೆ. ಹೊರಜಿಲ್ಲೆಯ ಅಭ್ಯರ್ಥಿಗಳಿಗೆ ಚುನಾವಣೆ ಬಂದಾಗ ಮಾತ್ರ ಕೊಡಗು ಯೋಚನೆಯಾಗುತ್ತಿದೆ ಎಂದರು.

ಮಾಜಿ ಸಚಿವರಾಗಿದ್ದ ಎ.ಮಂಜು ಜೆಡಿಎಸ್ ಅಭ್ಯರ್ಥಿಯಾಗಿ ಅರಕಲಗೂಡು ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಮಗ ಮಡಿಕೇರಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಮನೆಯಲ್ಲಿಯೇ ಮೈತ್ರಿ ಪಕ್ಷಗಳಿರುವ ಅಭ್ಯರ್ಥಿ ಬಗ್ಗೆ ಕಾಂಗ್ರೆಸ್ ನಲ್ಲಿಯೇ ಅಸಮಾಧಾನವಿದೆ.

ಬಿಜೆಪಿ ಸರ್ಕಾರ ಕೊಡಗಿನಲ್ಲಿ 5 ಸಾವಿರ ಕೋಟಿ ರೂ. ಗೂ ಅಧಿಕ ಯೋಜನೆಗೆ ಕಾರಣವಾಗಿದೆ. ಮಡಿಕೇರಿ ನಗರ ಸೇರಿದಂತೆ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿಯಾಗುವಂತೆ ಕಾಯ೯ಯೋಜನೆ ಜಾರಿಯಾಗಿದೆ.

ಶನಿವಾರ ಅಮಿತ್ ಶಾ ಮಡಿಕೇರಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ಬೆಳಗ್ಗೆ 9.30 ಗಂಟೆಗೆ ಮಡಿಕೇರಿಯ ಚೌಡೇಶ್ವರಿ ದೇವಾಲಯದಿಂದ ರೋಡ್ ಶೋ ಪ್ರಾರಂಭ ಆಗಲಿದ್ದು ಸಹಸ್ರಾರು ಕಾರ್ಯಕರ್ತರ ನಡುವೇ ಅಮಿತ್ ಶಾ ಸಾಗಿಹೋಗಲಿದ್ದಾರೆ. ಅಮಿತ್ ಶಾ ಕಳೆದ ಬಾರಿಯಂತೆ ಈ ಬಾರಿಯೂ ಮಡಿಕೇರಿಗೆ ಬರುತ್ತಿರುವುದು ಹೊಸ ಉತ್ಸಾಹ ತಂದಿದೆ. ಬಿಜೆಪಿ ಅಭ್ಯರ್ಥಿ ರಂಜನ್ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಪ್ರಮುಖರಾದ ಅನಿತಾ ಪೂವಯ್ಯ, ಮನುಮಂಜುನಾಥ್, ಮಹೇಶ್ ಜೈನಿ, ಬಿ.ಕೆ. ಅರುಣ್ ಕುಮಾರ್, ಕಾಂಗೀರ ಸತೀಶ್ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು