ಕೊಡಗು: ಜಿಲ್ಲೆಯ ಕುಶಾಲನಗರ ತಾಲೂಕು ಬಾಳುಗೋಡುನಲ್ಲಿ ಶನಿವಾರ ರಾತ್ರಿ ಕಿಡಿಗೇಡಿಗಳು ಆನೆಗೆ ಗುಂಡು ಹಾರಿಸಿ ಹತ್ಯೆಗೈದ ಘಟನೆ ನಡೆದಿದೆ.
ಸುಮಾರು 18 ರಿಂದ 20 ವರ್ಷದ ಹೆಣ್ಣು ಆನೆ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾಗಿದೆ. ಅರಣ್ಯ ಅಧಿಕಾರಿಗಳಾದ ಕೊಡಗು ಜಿಲ್ಲಾ ಡಿಎಫ್ಒ ಶಿವರಾಮ್ ಬಾಬು. ವಲಯ ಅರಣ್ಯಾಧಿಕಾರಿ ಶಿವರಾಮ್, ಉಪವಲಯ ಅರಣ್ಯಾಧಿಕಾರಿಗಳ ಅನಿಲ್ ಡಿಸೋಜ, ದೇವಯ್ಯ, ರಂಜನ್ ಹಾಗು ಆರ್ ಆರ್ ಟಿ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದಾರೆ.