ಕೊಡಗು: ಪಾಲಿಬೆಟ್ಟದಲ್ಲಿ ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡು ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಕಾರ್ಮಿಕ ಬಾಬಿ ಗುರುವಾರ ಮೃತಪಟ್ಟಿದ್ದಾರೆ.
ಇವರು ಮಸ್ಕಲ್ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ಮಾಡಿದೆ. ಈ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು, ಆದರೆ, ಚಿಕಿತ್ಸೆ ಫಲಕಾರಿಯಾಗದೆ ಎರಡು ದಿನಗಳ ನಂತರ ಮೃತಪಟ್ಟಿದ್ದಾರೆ.
ಮೃತರ ಕುಟುಂಬಕ್ಕೆ ದೂರವಾಣಿ ಮೂಲಕ ಶಾಸಕ ಎ.ಎಸ್ ಪೊನ್ನಣ್ಣ ಸಾಂತ್ವನ ಹೇಳಿದ್ದಾರೆ. ಈ ವೇಳೆ ತಕ್ಷಣ ತುರ್ತು ಪರಿಹಾರ ನೀಡಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸದ್ಯದಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಶಾಸಕ ಪೊನ್ನಣ್ಣ ಅವರ ನಿರ್ದೇಶನದ ಮೇರೆಗೆ ಕಾಂಗ್ರೆಸ್ ವಕ್ತಾರ ಸಂಕೇತ್ ಪೊವಯ್ಯ ಮೈಸೂರು ಆಸ್ಪತ್ರೆಗೆ ಭೇಟಿ ನೀಡಿ, ಕುಟುಂಬಕ್ಕೆ ಧೈರ್ಯ ತುಂಬಿ ಅಂತಿಮ ದರ್ಶನ ಪಡೆದಿದ್ದಾರೆ. ಜೊತೆಗೆ ಪರಿಹಾರ ಕಾರ್ಯಗಳ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.