News Kannada
Sunday, June 04 2023
ಮಡಿಕೇರಿ

ಮಡಿಕೇರಿ: ವಿಹಿಂಪ ಜಿಲ್ಲಾ ಅಧ್ಯಕ್ಷರ ಕೊಲೆಗೆ ಯತ್ನ ಪ್ರಕರಣ, ಆರೋಪಿಗಳ ಬಂಧನವಾಗದಿದ್ದಲ್ಲಿ ಹೋರಾಟ

Vishwa Hindu Parishad (VHP) district president's attempt to murder case: If the accused are not arrested, there will be fierce struggle
Photo Credit : News Kannada

ಮಡಿಕೇರಿ: ಚುನಾವಣೆಯ ಸಂದರ್ಭದಲ್ಲಿ ಚಟ್ಟಳ್ಳಿಯ ಅಭ್ಯಾಲ ದಲ್ಲಿ ವಿಶ್ವ ಹಿಂದು ಪರಿಷತ್ನ ಜಿಲ್ಲಾಧ್ಯಕ್ಷ ಹಾಗೂ ವಕೀಲರಾದ ಕೃಷ್ಣಮೂರ್ತಿ ಅವರ ಕಾರಿಗೆ  ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಕೃಷ್ಣಮೂರ್ತಿ ಅದೃಷ್ಟವಶಾತ್‌ ಬಚಾವಾಗಿದ್ದರು. ಈ ಸಂಬಂಧ ಕೃಷ್ಣಮೂರ್ತಿಯವರು ದೂರು ನೀಡಿ ಪ್ರಕರಣ ದಾಖಲಾಗಿತ್ತು.

ಈ ಘಟನೆ ನಡೆದು ಇಂದಿಗೆ ಒಂದೂವರೆ ತಿಂಗಳು ಕಳೆದರೂ ಕೂಡ ಆರೋಪಿಗಳ ಪತ್ತೆ ಆಗಿಲ್ಲ.  ಪೊಲೀಸ್ ವರಿಷ್ಠಾಧಿಕಾರಿಗಳು ಯಾಕೆ ಈ ಪ್ರಕರಣದತ್ತ ಹೆಚ್ಚು ಮಹತ್ವ ನೀಡಿಲ್ಲ ಎಂಬುದು ಈಗ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ. ಆರೋಪಿಗಳನ್ನು ಕೂಡಲೇ ಬಂದಿಸುವಂತೆ ಮಡಿಕೇರಿಯ ವಕೀಲರು ಕಲಾಪ ಬಹಿಷ್ಕರಿಸಿ ಮುಷ್ಕರವನ್ನು ಕೂಡ ನಡೆಸಿದ್ದರು. ಆದರೆ ಇದುವರೆಗೂ ಕೂಡ ತನಿಖೆಯ ಪ್ರಗತಿ ಕಾಣದೆ ಇನ್ನೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿಲ್ಲ. ಕೂಡಲೇ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟವನ್ನು ನಡೆಸಲಾಗುವುದೆಂದು ಜಿಲ್ಲೆಯ ವಿವಿಧ ಸಂಘಟನೆಗಳು ಎಚ್ಚರಿಸಿದ್ದಾರೆ.

See also  ಮಾತು ಆಲಿಸಲಿಲ್ಲವೆಂದು ಪತ್ನಿಯನ್ನು ಕೊಂದ ಪತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು