News Karnataka Kannada
Tuesday, March 19 2024
ಮಡಿಕೇರಿ

ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜಿಗೆ ಶಾಸಕ ಮಂತರ್ ಗೌಡ ಸೂಚನೆ

MLA Mantar Gowda instructs to supply drinking water through tankers
Photo Credit : News Kannada

ಮಡಿಕೇರಿ: ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಕೂಟುಹೊಳೆ ಜಾಕ್ವೆಲಿನ್ ನ 300 ಹೆಚ್.ಪಿ. ಮೋಟರ್ ನಲ್ಲಿ ತಾಂತ್ರಿಕ ದೋಷದಿಂದ ರಿಪೇರಿಯಾಗಿರುವ ಹಿನ್ನಲೆ ನಗರದ ಜನತೆಗೆ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಈ ಹಿನ್ನಲೆ ಕನಿಷ್ಟ 10 ಟ್ಯಾಂಕರ್ ಗಳಲ್ಲಿ ನೀರು ಸರಬರಾಜು ಮಾಡಲು ಸಿದ್ಧತೆ ಮಾಡಿಕೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ಮಡಿಕೇರಿ ಶಾಸಕ ಡಾ ಮಂತರ್ ಗೌಡ ಸೂಚನೆ ನೀಡಿದ್ದಾರೆ.

ಕೂಟುಹೊಳೆಯ ಪಂಪ್ ಮತ್ತು ಮೋಟಾರ್ ಪದೇ ಪದೇ ರಿಪೇರಿಯಾಗುತ್ತಿದ್ದು ಶಾಶ್ವತ ಪರಿಹಾರಕ್ಕಾಗಿ ಕೂಡಲೇ ಎಂಜಿನಿಯರ್ ಗಳಿಂದ ಹೊಸ ಮೋಟಾರ್ ಮತ್ತು ಪಂಪ್ ಅಳವಡಿಸುವ ಸಲುವಾಗಿ ಕೂಡಲೇ ಅಂದಾಜು ಪಟ್ಟಿ ತಯಾರಿಸಿ ನೀಡುವಂತೆ ಪೌರಾಯುಕ್ತರಿಗೆ ಶಾಸಕರು ಸೂಚಿಸಿದ್ದಾರೆ.

ಶಾಸಕರ ಅನುದಾನದಲ್ಲಿ ಕುಡಿಯುವ ನೀರು ಒದಗಿಸಲು ತಕ್ಷಣವೇ ಕ್ರಮ ಕೈಗೊಳ್ಳುವುದಾಗಿ ಡಾ ಮಂತರ್ ಗೌಡ ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು